ಗೆಜೆಟೆಡ್ ಪ್ರೊಬೇಷನರಿ ಹುದ್ದೆಯ ನೇಮಕಾತಿಗಾಗಿ ಮುಖ್ಯ ಪರೀಕ್ಷೆಯ ಡಿಜಿಟಲ್ ಮೌಲ್ಯಮಾಪನದ ಅಂಕಗಳನ್ನು ತಿರುಚಲಾಗಿದೆ ಎಂಬ ಆರೋಪ ಕೇಳಿಬಂದಿರುವುದು (ಪ್ರ.ವಾ., ಜ. 6), ಕರ್ನಾಟಕ ಲೋಕಸೇವಾ ಆಯೋಗದ ಬಗ್ಗೆ ನಿರುದ್ಯೋಗಿಗಳಲ್ಲಿ ನಿರಾಶೆ ಹುಟ್ಟಿಸಿದೆ. ಕೋರ್ಟು, ಕಚೇರಿಗೆ ತಿರುಗಿ ನ್ಯಾಯ ಪಡೆಯುವ ವೇಳೆಗೆ ಅಭ್ಯರ್ಥಿಗಳಿಗೆ ವಯಸ್ಸಾಗಿರುತ್ತದೆ. ಇಂತಹ ನ್ಯಾಯ ವಿಳಂಬದಿಂದ ಭ್ರಷ್ಟರು ಶಿಕ್ಷೆಯಿಂದ ಪಾರಾಗುವ ಸಾಧ್ಯತೆಯೂ ಹೆಚ್ಚಾಗಿರುತ್ತದೆ.