ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲಾವಿದರ ಗೌರವದ ಪ್ರಶ್ನೆ

ಅಕ್ಷರ ಗಾತ್ರ

ಕರ್ನಾಟಕ ನಾಟಕ ಅಕಾಡೆಮಿಯ ನಿಕಟಪೂರ್ವ ಅಧ್ಯಕ್ಷರು ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ.ರವಿ ಅವರನ್ನು ಭೇಟಿ ಮಾಡಿ, ತಮ್ಮ ಅವಧಿಯಲ್ಲಿ ಆಯ್ಕೆ ಮಾಡಿದ ರಂಗಸಾಧಕರ ಪ್ರಶಸ್ತಿ ಪಟ್ಟಿ ಹಾಗೂ ಪ್ರಸ್ತುತ ನಾಟಕ ಅಕಾಡೆಮಿಯ ಅಧ್ಯಕ್ಷರ ನೇತೃತ್ವದ ಸಮಿತಿ ಪ್ರಕಟಿಸಿರುವ ಪಟ್ಟಿ ಎರಡನ್ನೂ ಮಾನ್ಯ ಮಾಡಿ ಸಾಧಕರಿಗೆ ಪ್ರಶಸ್ತಿ ನೀಡುವಂತೆ ಮನವಿ ಮಾಡಿರುವುದಾಗಿ ಪತ್ರಿಕೆಗಳಲ್ಲಿ ವರದಿ ಆಗಿದೆ.

ಬಹಳ ಮುಖ್ಯವಾಗಿ ಇಲ್ಲಿ ಎದುರಾಗಿರುವುದು ಕಲಾವಿದರ ಗೌರವದ ಪ್ರಶ್ನೆ. ಈ ಬೇಡಿಕೆಯನ್ನು ಸಚಿವರು ಒಪ್ಪಿದರೆ, ನಡಾವಳಿಯಲ್ಲಿ ಏನೇ ಸಮಸ್ಯೆ ಆದರೂ ಸರ್ಕಾರ ನೋಡಿಕೊಳ್ಳುತ್ತದೆ ಎಂಬ ಧೋರಣೆಯನ್ನು ಸಾಂಸ್ಕೃತಿಕ ಅಕಾಡೆಮಿಗಳು ಮುಂಬರುವ ದಿನ‌ಗಳಲ್ಲಿ ತಾಳಬಹುದು! ಭವಿಷ್ಯದಲ್ಲಿ ಸಾಂಸ್ಕೃತಿಕ ಬಿಕ್ಕಟ್ಟು ಎದುರಾಗದಂತೆ ಸಚಿವರು ನಿರ್ಧಾರ ತೆಗೆದುಕೊಳ್ಳಬೇಕು. ಪ್ರಶಸ್ತಿಯ ಮೌಲ್ಯಗಳಿಂದಾಚೆಗೆ ಸಾಂಸ್ಕೃತಿಕ ಕ್ಷೇತ್ರದ ಘನತೆ ಬಹಳ ಮುಖ್ಯವಾಗುತ್ತದೆ.

‌–ಆರ್.ವೆಂಕಟರಾಜು,ಬೆಂಗಳೂರು

ಇನ್ನಷ್ಟು...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT