<p>ಸರ್ಕಾರವು ಜನಸಾಮಾನ್ಯರಿಗಾಗಿ ವಿವಿಧ ಯೋಜನೆಗಳನ್ನು ರೂಪಿಸಿದೆಯಾದರೂ ಇವುಗಳಲ್ಲಿ ಕೆಲವು ಯೋಜನೆಗಳ ಸದುಪಯೋಗ ಪಡೆದುಕೊಳ್ಳಲು ಸಾರ್ವಜನಿಕರು ವಿಫಲರಾಗಿದ್ದಾರೆ. ಇದಕ್ಕೆ ಮುಖ್ಯ ಕಾರಣ ಸರ್ಕಾರವೇ ಆಗಿದೆ. ಇಲಾಖೆಯ ಯೋಜನೆಗಳ ಬಗ್ಗೆ ಅರಿವು ಮೂಡಿಸಲು ಸರ್ಕಾರವು ಹೋಬಳಿ ಮಟ್ಟದಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳುತ್ತದೆ. ಆದರೆ ಈ ಕಾರ್ಯಕ್ರಮದಲ್ಲಿ ಕೇವಲ ಬೆರಳೆಣಿಕೆಯಷ್ಟು ಜನ ಸೇರುತ್ತಾರೆ. ಜೊತೆಗೆ, ಗ್ರಾಮ ಮಟ್ಟದಲ್ಲಿ ಜನರಿಗೆ ಸೂಕ್ತ ಅರಿವು ಮೂಡಿಸುವಲ್ಲಿ ಸರ್ಕಾರ ವಿಫಲಗೊಂಡಿದೆ.</p>.<p>ಪಹಣಿ ತಿದ್ದುಪಡಿ, ಸಂಧ್ಯಾ ಸುರಕ್ಷಾ, ವಿಧವಾ ಪಿಂಚಣಿ, ವೃದ್ಧಾಪ್ಯ ವೇತನದಂತಹ ಯೋಜನೆಗಳ ಸದುಪಯೋಗವನ್ನು ಬಹುತೇಕರು ಮಧ್ಯವರ್ತಿಗಳಿಲ್ಲದೇ ಪಡೆದುಕೊಳ್ಳಲು ಸಾಧ್ಯವಾಗುತ್ತಿಲ್ಲ. ಪ್ರತಿ ಫಲಾನುಭವಿಗೂ ಯೋಜನೆಯ ನೆರವು ದೊರೆಯುವಂತೆ ಆಗಬೇಕು. ಅಧಿಕಾರಿಗಳು ಜನರಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸಬೇಕು.</p>.<p><em><strong>-ವಿಜಯ್ಕುಮಾರ್ ಎಚ್.ಕೆ., ರಾಯಚೂರು</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸರ್ಕಾರವು ಜನಸಾಮಾನ್ಯರಿಗಾಗಿ ವಿವಿಧ ಯೋಜನೆಗಳನ್ನು ರೂಪಿಸಿದೆಯಾದರೂ ಇವುಗಳಲ್ಲಿ ಕೆಲವು ಯೋಜನೆಗಳ ಸದುಪಯೋಗ ಪಡೆದುಕೊಳ್ಳಲು ಸಾರ್ವಜನಿಕರು ವಿಫಲರಾಗಿದ್ದಾರೆ. ಇದಕ್ಕೆ ಮುಖ್ಯ ಕಾರಣ ಸರ್ಕಾರವೇ ಆಗಿದೆ. ಇಲಾಖೆಯ ಯೋಜನೆಗಳ ಬಗ್ಗೆ ಅರಿವು ಮೂಡಿಸಲು ಸರ್ಕಾರವು ಹೋಬಳಿ ಮಟ್ಟದಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳುತ್ತದೆ. ಆದರೆ ಈ ಕಾರ್ಯಕ್ರಮದಲ್ಲಿ ಕೇವಲ ಬೆರಳೆಣಿಕೆಯಷ್ಟು ಜನ ಸೇರುತ್ತಾರೆ. ಜೊತೆಗೆ, ಗ್ರಾಮ ಮಟ್ಟದಲ್ಲಿ ಜನರಿಗೆ ಸೂಕ್ತ ಅರಿವು ಮೂಡಿಸುವಲ್ಲಿ ಸರ್ಕಾರ ವಿಫಲಗೊಂಡಿದೆ.</p>.<p>ಪಹಣಿ ತಿದ್ದುಪಡಿ, ಸಂಧ್ಯಾ ಸುರಕ್ಷಾ, ವಿಧವಾ ಪಿಂಚಣಿ, ವೃದ್ಧಾಪ್ಯ ವೇತನದಂತಹ ಯೋಜನೆಗಳ ಸದುಪಯೋಗವನ್ನು ಬಹುತೇಕರು ಮಧ್ಯವರ್ತಿಗಳಿಲ್ಲದೇ ಪಡೆದುಕೊಳ್ಳಲು ಸಾಧ್ಯವಾಗುತ್ತಿಲ್ಲ. ಪ್ರತಿ ಫಲಾನುಭವಿಗೂ ಯೋಜನೆಯ ನೆರವು ದೊರೆಯುವಂತೆ ಆಗಬೇಕು. ಅಧಿಕಾರಿಗಳು ಜನರಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸಬೇಕು.</p>.<p><em><strong>-ವಿಜಯ್ಕುಮಾರ್ ಎಚ್.ಕೆ., ರಾಯಚೂರು</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>