ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಂಡಿಸಿದ ಈ ಬಾರಿಯ ಬಜೆಟ್ನಲ್ಲಿ ಪೆಟ್ರೋಲ್, ಡೀಸೆಲ್ ಮೇಲೆ ತೆರಿಗೆ ಏರಿಸಿರುವುದು ಜನಸಾಮಾನ್ಯರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಅಡುಗೆ ಅನಿಲ ಸಿಲಿಂಡರ್ ಬೆಲೆ ಹೆಚ್ಚಳ, ಹಾಲಿನ ದರ ಏರಿಕೆ, ಕೆಎಸ್ಆರ್ಟಿಸಿ ಪ್ರಯಾಣ ದರದ ಹೆಚ್ಚಳದಿಂದ ಈಗಾಗಲೇ ತತ್ತರಿಸಿರುವ ಜನರಿಗೆ, ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಿಸಿತುಪ್ಪವಾಗಿ ಪರಿಣಮಿಸಿದೆ.