ಈಗಿನ ಲಾಕ್ಡೌನ್ ಸ್ಥಿತಿಯಲ್ಲಿ ಅವರು ಊರುಗಳಿಂದ ಬೆಂಗಳೂರಿಗೆ ಬರಲಾಗುತ್ತಿಲ್ಲ. ಹೀಗಾಗಿ ಪರ್ಯಾಯ ಕಾರ್ಮಿಕರನ್ನು, ತಂತ್ರಜ್ಞರನ್ನು ಚಿತ್ರೀಕರಣಕ್ಕೆ ನೇಮಿಸಿಕೊಂಡರೆ, ತಮ್ಮದಲ್ಲದ ತಪ್ಪಿಗಾಗಿ ಈ ಬಡಪಾಯಿಗಳ ಹೊಟ್ಟೆ ಮೇಲೆ ತಣ್ಣೀರು ಬಟ್ಟೆ ಬೀಳುತ್ತದೆ. ಕೊನೇಪಕ್ಷ ಈ ತಿಂಗಳ ಕೊನೆಯವರೆಗಾದರೂ ಇವುಗಳ ಚಿತ್ರೀಕರಣ ಸ್ಥಗಿತ
ಗೊಳಿಸುವುದು ಒಳ್ಳೆಯದು.
-ಎಸ್.ಯತೀಶ್ ಕುಮಾರ್,ಸಾಸಲುಕೊಪ್ಪ, ನಾಗಮಂಗಲ