ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆಯುವ ಚುನಾವಣೆಗೆ ಬಿಜೆಪಿಯು ಈರಣ್ಣ ಕಡಾಡಿ ಮತ್ತು ಅಶೋಕ ಗಸ್ತಿ ಅವರಂತಹ ಸಾಮಾನ್ಯ ಕಾರ್ಯಕರ್ತರಿಗೆ ಟಿಕೆಟ್ ನೀಡಿರುವುದು ಕಾರ್ಯಕರ್ತರ ಹುಮ್ಮಸ್ಸು ಹಿಗ್ಗಿಸಿದೆ. ಇದಕ್ಕೆ ವ್ಯತಿರಿಕ್ತವಾಗಿ, ಉಳಿದ ಎರಡು ಸ್ಥಾನಗಳಿಗೆ ತಲಾ ಒಬ್ಬರಂತೆ ಕಾಂಗ್ರೆಸ್ ಮತ್ತು ಜೆಡಿಎಸ್ ಕ್ರಮವಾಗಿ ಮಲ್ಲಿಕಾರ್ಜುನ ಖರ್ಗೆ ಮತ್ತುಎಚ್.ಡಿ.ದೇವೇಗೌಡರನ್ನು ಕಣಕ್ಕೆ ಇಳಿಸಿವೆ.