ಎಸ್ಎಸ್ಎಲ್ಸಿ ಮತ್ತು ನಂತರದ ಹಂತದಲ್ಲಿ ವಿದ್ಯಾರ್ಥಿಗಳು ಪ್ರೌಢಾವಸ್ಥೆಗೆ ಬಂದಿರುವುದರಿಂದ ಸಾಮಾಜಿಕ ಅಂತರವನ್ನು ಕಡ್ಡಾಯವಾಗಿ ಪಾಲಿಸುತ್ತಾರೆ. ಜೊತೆಗೆ, ಆಗಸ್ಟ್ವರೆಗೆ ಶಾಲಾ– ಕಾಲೇಜುಗಳನ್ನು ಮುಚ್ಚುವುದರಿಂದ ಅದನ್ನೇ ನಂಬಿಕೊಂಡಿರುವ ಅನುದಾನರಹಿತ ಶಿಕ್ಷಕರು, ಅತಿಥಿ ಉಪನ್ಯಾಸಕರು, ಬೋಧಕೇತರ ಸಿಬ್ಬಂದಿಯು ಸಂಬಳವಿಲ್ಲದೆ ತೊಂದರೆಗೆ ಒಳಗಾಗುತ್ತಾರೆ. ಆದ್ದರಿಂದ ಎಸ್ಎಸ್ಎಲ್ಸಿ ಮತ್ತು ನಂತರದ ತರಗತಿಗಳನ್ನು ಪ್ರಾರಂಭಿಸುವ ದಿಸೆಯಲ್ಲಿ ಸರ್ಕಾರ ಯೋಚಿಸಬೇಕು.