ಜನರ ನಡುವೆ ಇದ್ದುಕೊಂಡು ಕೆಲಸ ಮಾಡುತ್ತಿರುವ ಈರಣ್ಣ ಕಡಾಡಿ ಮತ್ತು ಅಶೋಕ ಗಸ್ತಿ ಅವರಿಗೆ ಟಿಕೆಟ್ ನೀಡಿರುವುದು ಒಪ್ಪತಕ್ಕ ನಡೆ. ಉಳ್ಳವರು ಮತ್ತು ರಾಜಕೀಯ ಪ್ರಭಾವ ಹೊಂದಿರುವ ಕುಟುಂಬಗಳಿಗಷ್ಟೇ ಸದಾ ಮಣೆ ಹಾಕದೆ, ಶ್ರೀಸಾಮಾನ್ಯರು ಹಾಗೂ ನಿಷ್ಠಾವಂತ ಕಾರ್ಯಕರ್ತರಿಗೆ ಅವಕಾಶ ಕೊಡುವುದನ್ನು ಬಿಜೆಪಿಯೇತರ ಪಕ್ಷಗಳೂ ರೂಢಿಸಿಕೊಳ್ಳಲಿ. ಪಕ್ಷದ ಕಾರ್ಯಕರ್ತರಲ್ಲಿ ಆ ಮೂಲಕ ಆತ್ಮವಿಶ್ವಾಸ ಮೂಡುವಂತೆ ಮಾಡಲಿ.