ಸಾವು ಎಂಬ ‘ಒಳ್ಳೆ ಸುದ್ದಿ!’ ಬರಹ (ಸಂಗತ, ಜೂನ್ 11) ಅತ್ಯಂತ ಪ್ರಸ್ತುತವಾಗಿದೆ. ಲೇಖಕಿ ಗೀತಾವಸಂತ್ ಇಜಿಮಾನ್ ತಿಳಿಸಿರುವಂತೆ, ದೃಶ್ಯ ಮಾಧ್ಯಮದಲ್ಲಿ ಬಿತ್ತರವಾಗುವ ಇಂತಹ ಸಾವಿನ ಸುದ್ದಿಗಳು,ಅಂತ್ಯಸಂಸ್ಕಾರದ ನೇರಾನೇರ ದೃಶ್ಯಾವಳಿಗಳು ಪ್ರೇಕ್ಷಕರ ಮನಸ್ಸಿನ ಮೇಲೆ ಗಾಢ ಪರಿಣಾಮವನ್ನುಂಟು ಮಾಡುತ್ತವೆ. ಇದರಿಂದ ದೊಡ್ಡವರದಷ್ಟೇ ಅಲ್ಲ ಮಕ್ಕಳ ಮನಸ್ಸೂ ಹದಗೆಡುತ್ತದೆ. ಇದಕ್ಕೆ ನನ್ನ ಸ್ನೇಹಿತರ ಮಗಳೇ ಉದಾಹರಣೆ!