ಸಾಂಕ್ರಾಮಿಕದ ಪರಿಸ್ಥಿತಿ ಇನ್ನೂ ಹಲವು ತಿಂಗಳುಗಳವರೆಗೆ ಮುಂದುವರಿಯುತ್ತದೆ ಎಂದು ನಿರೀಕ್ಷಿಸ ಲಾಗಿದೆ. ಹೀಗಿರುವಾಗ ಬಿಸಿಯೂಟಕ್ಕೆ ತಕ್ಷಣ ಚಾಲನೆ ಸಿಗದೇ ಹೋದರೆ ಮಕ್ಕಳ ಆರೋಗ್ಯ ಮತ್ತು ಪೌಷ್ಟಿ ಕಾಂಶದ ಸ್ಥಿತಿ ಮತ್ತಷ್ಟು ಹದಗೆಡಬಹುದು. ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡುವ ಪ್ರಯತ್ನ ಗಳಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಮಕ್ಕಳಲ್ಲಿ ಪೌಷ್ಟಿಕಾಂಶದ ಅಸಮತೋಲನವನ್ನು ಸರಿ ದೂಗಿಸುವುದೂ ಒಂದು. ಹೀಗಾಗಿ, ಸಿರಿಧಾನ್ಯಗಳು ಮತ್ತು ತರಕಾರಿಗಳೊಂದಿಗೆ ಬಿಸಿಯೂಟವನ್ನು ಪೂರೈಸಬೇಕಾಗಿದೆ.