ಎಲ್ಲಾ ಬಗೆಯ ಕೆಮ್ಮು, ನೆಗಡಿಯೂ ಕೋವಿಡ್ ಅಲ್ಲ, ಒಂದುವೇಳೆ ಕೊರೊನಾ ಸೋಂಕಿತರಾಗಿದ್ದರೂ ಎಲ್ಲರೂ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಪಡೆಯಬೇಕಾದ ಅಗತ್ಯವಿಲ್ಲ, ಸಾಮಾನ್ಯವಾಗಿ ಕೊರೊನಾ ಸುರಕ್ಷಾ ಕ್ರಮಗಳನ್ನು ಅನುಸರಿಸಿದರೆ ಸಾಕು ಎಂಬುದನ್ನು ಮೊದಲು ಜನರಿಗೆ ಮನದಟ್ಟು ಮಾಡಿಸಬೇಕು. ಕೊರೊನಾಕ್ಕಿಂತ ಅದರ ಬಗೆಗಿನ ಭಯವೇ ನಮ್ಮನ್ನು ಹೆಚ್ಚು ದುರ್ಬಲರನ್ನಾಗಿ ಮಾಡುತ್ತದೆ. ಹೀಗಾಗಿ ವೈದ್ಯರು ರೋಗಿಗೆ ಚಿಕಿತ್ಸೆಯ ಜೊತೆಗೆ ಆತ್ಮಸ್ಥೈರ್ಯ ತುಂಬುವ ಕೆಲಸವನ್ನೂ ಮಾಡಬೇಕು. ಎಲ್ಲಿಯವರೆಗೆ ನಾವು ಕೊರೊನಾ ಬಗ್ಗೆ ಭಯ ಬಿಟ್ಟು ಎಚ್ಚರಿಕೆಯಿಂದ ವರ್ತಿಸುತ್ತೇವೆಯೋ ಅದು ನಮ್ಮ ಏಳ್ಗೆಗೆ ಸಹಕಾರಿ ಎಂಬುದನ್ನು ಅರಿಯಬೇಕು. ಸುರಕ್ಷಾ ನಿಯಮಗಳನ್ನು ಪಾಲಿಸುತ್ತಾ ಮೊದಲಿನ ಜೀವನಕ್ಕೆ ಮರಳಲು ಸಿದ್ಧರಾಗಬೇಕು. ಆಗ ಮಾತ್ರ ದೇಶದ ಆರ್ಥಿಕ ಚಕ್ರ ವೇಗ ಪಡೆಯಲು ಸಾಧ್ಯ.