ಹುಣಸೂರು ಶಾಸಕ ಎಚ್.ಪಿ.ಮಂಜುನಾಥ್ ಹಾಗೂ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ
ಅವರ ನಡುವೆ ನಡೆಯುತ್ತಿರುವ ಜಟಾಪಟಿ ಮಾಧ್ಯಮಗಳಲ್ಲಿ ವರದಿಯಾಗುತ್ತಿದೆ. ತಮ್ಮ ಕ್ಷೇತ್ರದ ಜನರ ಕಷ್ಟ ಕಾರ್ಪಣ್ಯಗಳಿಗೆ ಜಿಲ್ಲಾಧಿಕಾರಿ ಸೂಕ್ತ ರೀತಿಯಲ್ಲಿ ಸ್ಪಂದಿಸುತ್ತಿಲ್ಲವೆಂದು ದೂರಿರುವ ಮಂಜುನಾಥ್, ಮೈಸೂರಿಗೆ ಮೂರನೇ ಮಹಾರಾಣಿಯ ಅಗತ್ಯವಿಲ್ಲವೆಂಬ ಅನುಚಿತ ಹೇಳಿಕೆ ನೀಡಿದ್ದಾರೆ. ಇದಕ್ಕೆ ಸಂಬಂಧಪಟ್ಟಂತೆ, ಸದರಿ ಶಾಸಕರಿಗೆ ಜಿಲ್ಲಾಧಿಕಾರಿ ಮೂರು ಪುಟಗಳ ಪತ್ರ ಬರೆದಿದ್ದು, ಶಾಸಕರ ಆರೋಪಗಳನ್ನು ತಳ್ಳಿಹಾಕಿದ್ದಾರೆ. ಈ ಪತ್ರವು ಶಾಸಕರನ್ನು ತಲುಪುವ ಮೊದಲೇ ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟವಾಗಿದೆ.