ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಭ್ಯರ್ಥಿಯ ಆಯ್ಕೆ ಶಾಂತಿಯುತವಾಗಿರಲಿ

ಅಕ್ಷರ ಗಾತ್ರ

ಹೊಸಪೇಟೆ ತಾಲ್ಲೂಕಿನ ‍ಪೋತಲಕಟ್ಟೆ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಗೆ ಸ್ಪರ್ಧಿಸಲು ಅಭ್ಯರ್ಥಿಗಳನ್ನು ಹರಾಜಿನ ಮೂಲಕ ಆಯ್ಕೆ ಮಾಡಲು ಮುಂದಾದ ಕ್ರಮವನ್ನು ಪ್ರಶ್ನಿಸಿದವರ ಮೇಲೇ ಹಲ್ಲೆ ನಡೆಸಿ, ದೂರು ನೀಡಿರುವ ಬಗ್ಗೆ ವರದಿಯಾಗಿದೆ (ಪ್ರ.ವಾ. ಡಿ. 7). ಆ ಗ್ರಾಮದ ‘ಸಮೂಹ ಶಕ್ತಿ’ ಸಂಘಟನೆಯ ಕಾರ್ಯಕರ್ತರು ಅರ್ಹರನ್ನು ನಿಲ್ಲಿಸಬೇಕೆಂದು ನಿರ್ಧರಿಸಿರುವುದು ಸರಿಯಾಗಿದೆ. ಆದರೆ ಗ್ರಾಮದ ಮುಖಂಡರು, ಈ ಅಭಿಪ್ರಾಯವನ್ನು ನಿರ್ಲಕ್ಷಿಸಿರುವುದು ಖಂಡನೀಯ. ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಅಭಿಪ್ರಾಯ ವ್ಯಕ್ತಪಡಿಸುವ ಸ್ವಾತಂತ್ರ್ಯ ಇರುತ್ತದೆ. ಚುನಾವಣೆಗೋಸ್ಕರ ಸ್ನೇಹ ಸಂಬಂಧಗಳನ್ನು ಹಾಳು ಮಾಡಿಕೊಳ್ಳದೆ, ಶಾಂತಿಯುತವಾಗಿ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡುವುದು ಸೂಕ್ತ.

- ಶ್ರೀಧರ ಎಸ್. ವಾಣಿ,ಕೊಪ್ಪಳ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT