ಬಿಜೆಪಿ ಹಾಗೂ ಕಾಂಗ್ರೆಸ್ನ ದೂತರು ದೆಹಲಿಯಿಂದ ಬೆಂಗಳೂರಿಗೆ ಬಂದು ಉಪದೇಶ ಉದುರಿಸಿದ್ದಾರೆ. ಬಿಜೆಪಿಯ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ‘ಸರ್ಕಾರ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವ ಮುಂಚೆ ಸ್ಥಳೀಯ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಚರ್ಚಿಸಬೇಕು’ ಎಂದು ಮುಖ್ಯಮಂತ್ರಿಗೆ ಹೇಳಿದ್ದಾರೆ ಎಂದು ವರದಿಯಾಗಿದೆ. ಈ ಉಪದೇಶವು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರಿಗೆ ಅನ್ವಯವಾಗದೇ? ನೋಟು ರದ್ದತಿ, ಪೌರತ್ವ ಮಸೂದೆ, ಕೃಷಿ ಕಾಯ್ದೆಯಂತಹ ಪ್ರಮುಖ ನಿರ್ಧಾರಗಳ ಬಗ್ಗೆ ಸಂಪುಟದ ಸದಸ್ಯರು ಮತ್ತು ಪಕ್ಷದ ಪದಾಧಿಕಾರಿಗಳೊಂದಿಗೆ ಅವರು ಸರಿಯಾಗಿ ಚರ್ಚಿಸಿದ್ದರೇ? ಇವು ಏಕಪಕ್ಷೀಯ ನಿರ್ಧಾರಗಳಲ್ಲವೇ? ಪ್ರಜಾಪ್ರಭುತ್ವದಲ್ಲಿ ಪ್ರತಿಪಕ್ಷದ ದಿಗ್ಗಜರ ವಿಶ್ವಾಸ ಗಳಿಸಬೇಕಲ್ಲವೇ?