ಕನ್ನಡ ಮಾತೃಭಾಷೆಯಲ್ಲದ ಸರ್ಕಾರಿ ಉರ್ದು ಶಾಲೆಗಳ ಮಕ್ಕಳಿಗೆ ಕನ್ನಡ ಕಲಿಸುವುದು ಸವಾಲಿನ ಕೆಲಸವೆಂದೂ ಕನ್ನಡೇತರ ಮಕ್ಕಳಿಗೆ ಕನ್ನಡ ಕಲಿಸುವ ಇಂತಹ ಕನ್ನಡ ಶಿಕ್ಷಕರನ್ನು ಗುರುತಿಸಿ ಪ್ರೊತ್ಸಾಹಿಸಬೇಕೆಂದೂಡಾ. ಗುರುಪ್ರಸಾದ ಎಚ್.ಎಸ್. ಹೇಳಿದ್ದಾರೆ (ಪ್ರ.ವಾ., ಡಿ. 7). ಕನ್ನಡ ಭಾಷೆಯನ್ನು ಶಾಲೆಗೆ ಬರುವವರೆಗೆ ಕೇಳಿರದ, ಮಾತನಾಡಿರದ ಮಕ್ಕಳಿಗೆ ಕನ್ನಡ ಕಲಿಸುವುದು ಸವಾಲಿನ ಕೆಲಸವಾಗಿರುವಂತೆ, ಇಂಗ್ಲಿಷ್ ಭಾಷೆಯನ್ನೋ ಹಿಂದಿ ಭಾಷೆಯನ್ನೋ ಶಾಲೆಗೆ ಬರುವವರೆಗೆ ಕೇಳಿರದ, ಮಾತನಾಡಿರದ ಮಕ್ಕಳಿಗೆ ಈ ಭಾಷೆಗಳನ್ನು ಕಲಿಸುವುದೂ ಸವಾಲಿನ ಕೆಲಸವೇ. ಮಹಾರಾಷ್ಟ್ರದ ಗಡಿಗ್ರಾಮದ ಪ್ರಾಥಮಿಕ ಶಾಲಾ ಶಿಕ್ಷಕ ರಂಜಿತ್ಸಿಂಹ ದಿಸಳೆಯವರಿಗೆ ಜಾಗತಿಕ ಪ್ರಶಸ್ತಿ ಬಂದಿರುವುದನ್ನು ಉದಾಹರಿಸಿ ಅವರು ಈ ಪತ್ರ ಬರೆದಿದ್ದಾರೆ.