‘ಶಾಲಾ ಪಠ್ಯಪುಸ್ತಕಗಳಲ್ಲಿರುವ ದೋಷಗಳನ್ನು ಸಾರ್ವಜನಿಕರು ಗಂಭೀರವಾಗಿ ಗಮನಿಸಿದ್ದರೆ, ಸಂಬಂಧಪಟ್ಟವರ ಮೇಲೆ ಹಲ್ಲೆ ಮಾಡುತ್ತಿದ್ದರು’ ಎಂಬ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರ ಹೇಳಿಕೆ (ಪ್ರ.ವಾ., ಅ. 9) ಖಂಡನೀಯ. ಈ ಹೇಳಿಕೆಯ ಮೂಲಕ ಸಚಿವರು ಪಠ್ಯಪುಸ್ತಕ ರಚನಾಕಾರರ ಮೇಲೆ ಪರೋಕ್ಷವಾಗಿ ಹಿಂಸೆಗೆ ಪ್ರಚೋದಿಸಿರುವಂತೆ ತೋರುತ್ತದೆ. ಪಠ್ಯಪುಸ್ತಕ ರಚನೆ ಮಾಡಿರುವವರು ವಿಷಯ ತಜ್ಞರೇ ಆಗಿರುವಾಗ, ಅವುಗಳಲ್ಲಿ ದೋಷಗಳಿದ್ದರೆ ವಿಷಯ ತಜ್ಞರ ಸಮಿತಿ ಪರಿಶೀಲಿಸಿ, ಚರ್ಚಿಸಿ ತೀರ್ಮಾನಿಸಬೇಕು ಎಂಬ ಅರಿವು ಸಚಿವರಿಗೆ ಇರಬೇಕಿತ್ತು.