ರಾಜ್ಯದಲ್ಲಿ ನಾಲ್ಕೈದು ತಿಂಗಳುಗಳ ಹಿಂದೆಯೇ ಗ್ರಾಮ ಪಂಚಾಯಿತಿ ಚುನಾವಣೆ ನಡೆಯಬೇಕಿತ್ತು. ಕೊರೊನಾ ಪರಿಣಾಮದ ಕಾರಣದಿಂದ ಚುನಾವಣೆಯನ್ನು ಸರ್ಕಾರ ಮುಂದೂಡಿ, ಪಂಚಾಯಿತಿಗಳಿಗೆ ಆಡಳಿತಾಧಿಕಾರಿಗಳನ್ನು ನೇಮಕ ಮಾಡಿತು. ಆದರೆ ಇದೀಗ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಅಂತಹ ಬಾಧಕ ಇಲ್ಲ. ಇದ್ಯಾವ ನ್ಯಾಯ?