ಭ್ರಷ್ಟಾಚಾರ ನಿರ್ಮೂಲನೆ ಕಷ್ಟ ಎಂಬ ಅಭಿಪ್ರಾಯವನ್ನು ದೇಶದ ಮುಕ್ಕಾಲು ಭಾಗದಷ್ಟು ಜನ ವ್ಯಕ್ತಪಡಿಸಿದ್ದಾರೆ ಎಂಬುದು ‘ಲೋಕಲ್ ಸರ್ಕಲ್’ ಸಂಸ್ಥೆಯ ಸಮೀಕ್ಷೆಯಿಂದ ತಿಳಿದುಬಂದಿದೆ ಎಂದು ವರದಿಯಾಗಿದೆ. ಇದರಲ್ಲಿ ಆಶ್ಚರ್ಯಪಡುವಂತಹದ್ದು ಏನೂ ಇಲ್ಲ. ನಮ್ಮ ಸಾರ್ವಜನಿಕ ಸಂಸ್ಥೆಗಳು ಕಾರ್ಯನಿರ್ವಹಿಸುವ ವೈಖರಿಯನ್ನು ನೋಡಿರುವ, ಸ್ವತಃ ಅನುಭವಿಸಿರುವ ದೇಶದ ಶ್ರೀಸಾಮಾನ್ಯ ಇದಕ್ಕಿಂತ ಬೇರೆ ಅಭಿಪ್ರಾಯ ಹೊಂದಿರಲು ಸಾಧ್ಯವಿಲ್ಲ.