<p>ಕೋವಿಡ್- 19ರ ಹಿನ್ನೆಲೆಯಲ್ಲಿ ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿ (ಸಿಬಿಎಸ್ಇ) 9ರಿಂದ 12ನೇ ತರಗತಿಯ ವಿದ್ಯಾರ್ಥಿಗಳಿಗೆ ತನ್ನ ಪಠ್ಯಕ್ರಮವನ್ನು ಪರಿಷ್ಕರಿಸಿದೆ.</p>.<p>ಇಂತಹ ಬಿಕ್ಕಟ್ಟಿನ ಸಂದರ್ಭದಲ್ಲಿ ಶೈಕ್ಷಣಿಕ ವರ್ಷವನ್ನು ಸರಿದೂಗಿಸಬೇಕಾದ ಅಗತ್ಯವಿರುವುದರಿಂದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ನಿರ್ಧಾರ ಸ್ವಾಗತಾರ್ಹ. ಆದರೆ, ಪ್ರಮುಖವಾಗಿ 11ನೇ ತರಗತಿಯ ರಾಜಕೀಯ ವಿಜ್ಞಾನ ಪಠ್ಯಕ್ರಮದಿಂದ ಒಕ್ಕೂಟ ವ್ಯವಸ್ಥೆ, ಪೌರತ್ವ, ರಾಷ್ಟ್ರೀಯತೆ ಮತ್ತು ಜಾತ್ಯತೀತತೆಯಂತಹ ವಿಷಯಗಳನ್ನು ಕೈಬಿಟ್ಟಿರುವುದನ್ನು ಪುನರ್ಪರಿಶೀಲಿಸಬೇಕಾದ ಅನಿವಾರ್ಯ ಇದೆ.</p>.<p>ಏಕೆಂದರೆ ಒಕ್ಕೂಟ ವ್ಯವಸ್ಥೆ, ಜಾತ್ಯತೀತ ಮತ್ತು ಪ್ರಜಾಪ್ರಭುತ್ವದ ಬೇರುಗಳು ಭಾರತವನ್ನು ವೈವಿಧ್ಯಮಯ130 ಕೋಟಿ ಜನಸಂಖ್ಯೆಯ ಅಖಂಡ ರಾಷ್ಟ್ರವಾಗಿ ಮುಂದುವರಿಸಿಕೊಂಡು ಹೋಗುತ್ತಿವೆ. ಇಂದಿನ ಮಕ್ಕಳು ಮುಂದಿನ ಪ್ರಜೆಗಳಾದ್ದರಿಂದ ಅವರಿಗೆ ಇಂತಹ ಪರಿಕಲ್ಪನೆಗಳನ್ನು ತಿಳಿಸವಲ್ಲಿ ಶಿಕ್ಷಣದ ಪಾತ್ರ ಅತ್ಯಂತ ಮಹತ್ವದಾಗಿದೆ.<br />-<em><strong>ಪ್ರವೀಣ ನಾಗಪ್ಪ ಯಲವಿಗಿ,ಹಾವೇರಿ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೋವಿಡ್- 19ರ ಹಿನ್ನೆಲೆಯಲ್ಲಿ ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿ (ಸಿಬಿಎಸ್ಇ) 9ರಿಂದ 12ನೇ ತರಗತಿಯ ವಿದ್ಯಾರ್ಥಿಗಳಿಗೆ ತನ್ನ ಪಠ್ಯಕ್ರಮವನ್ನು ಪರಿಷ್ಕರಿಸಿದೆ.</p>.<p>ಇಂತಹ ಬಿಕ್ಕಟ್ಟಿನ ಸಂದರ್ಭದಲ್ಲಿ ಶೈಕ್ಷಣಿಕ ವರ್ಷವನ್ನು ಸರಿದೂಗಿಸಬೇಕಾದ ಅಗತ್ಯವಿರುವುದರಿಂದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ನಿರ್ಧಾರ ಸ್ವಾಗತಾರ್ಹ. ಆದರೆ, ಪ್ರಮುಖವಾಗಿ 11ನೇ ತರಗತಿಯ ರಾಜಕೀಯ ವಿಜ್ಞಾನ ಪಠ್ಯಕ್ರಮದಿಂದ ಒಕ್ಕೂಟ ವ್ಯವಸ್ಥೆ, ಪೌರತ್ವ, ರಾಷ್ಟ್ರೀಯತೆ ಮತ್ತು ಜಾತ್ಯತೀತತೆಯಂತಹ ವಿಷಯಗಳನ್ನು ಕೈಬಿಟ್ಟಿರುವುದನ್ನು ಪುನರ್ಪರಿಶೀಲಿಸಬೇಕಾದ ಅನಿವಾರ್ಯ ಇದೆ.</p>.<p>ಏಕೆಂದರೆ ಒಕ್ಕೂಟ ವ್ಯವಸ್ಥೆ, ಜಾತ್ಯತೀತ ಮತ್ತು ಪ್ರಜಾಪ್ರಭುತ್ವದ ಬೇರುಗಳು ಭಾರತವನ್ನು ವೈವಿಧ್ಯಮಯ130 ಕೋಟಿ ಜನಸಂಖ್ಯೆಯ ಅಖಂಡ ರಾಷ್ಟ್ರವಾಗಿ ಮುಂದುವರಿಸಿಕೊಂಡು ಹೋಗುತ್ತಿವೆ. ಇಂದಿನ ಮಕ್ಕಳು ಮುಂದಿನ ಪ್ರಜೆಗಳಾದ್ದರಿಂದ ಅವರಿಗೆ ಇಂತಹ ಪರಿಕಲ್ಪನೆಗಳನ್ನು ತಿಳಿಸವಲ್ಲಿ ಶಿಕ್ಷಣದ ಪಾತ್ರ ಅತ್ಯಂತ ಮಹತ್ವದಾಗಿದೆ.<br />-<em><strong>ಪ್ರವೀಣ ನಾಗಪ್ಪ ಯಲವಿಗಿ,ಹಾವೇರಿ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>