<p>ಕುದಿಯುತ್ತಿದೆ ಭೂಮಿ (ಪ್ರ.ವಾ., ಡಿ. 4) ಮತ್ತು ಮುಂದಿದೆ ಕರಾಳ ದಿನ (ಪ್ರ.ವಾ., ನ. 21) ಸುದ್ದಿಗಳನ್ನು ಓದಿ ಗಾಬರಿಯಾಯಿತು. ಇಂತಹ ದುರದೃಷ್ಟಕರ ಕಾಲವನ್ನು ಮುಂದಿನ ಪೀಳಿಗೆ ಎದುರಿಸಬೇಕಾಗಿ ಬಂದಿರುವುದನ್ನು ತಿಳಿದರೆ ವಿಷಾದವಾಗುತ್ತದೆ. ಮೋಜು- ಮಸ್ತಿ, ಭೋಗವೇ ಜೀವನವೆನ್ನುವ ರೋಗಗ್ರಸ್ತ ಕಾಲವಿದು. ಮನುಷ್ಯನ ಪ್ರಜ್ಞೆ, ಸಂವೇದನಾಶೀಲತೆ ಜಡ್ಡುಗಟ್ಟಿದ ಕಾಲದಲ್ಲಿ ನಾವು ಬದುಕುತ್ತಿದ್ದೇವೆ. ಅದನ್ನು ಸರಿಪಡಿಸಲು ಈಗ ಕೈಗೊಂಡಿರುವ ಕ್ರಮಗಳು ಏನೇನೂ ಸಾಲವು. ಇದು ಕ್ಯಾನ್ಸರ್ ರೋಗಕ್ಕೆ ಆಸ್ಪಿರಿನ್ ಕೊಟ್ಟಂತೆ.</p>.<p>ಕೋಪಿಷ್ಟಳಾದ ಭೂಮಿತಾಯಿಯ ಸಾಂತ್ವನಕ್ಕಾಗಿ ಹಾಗೂ ಮುಂದಿನ ಪೀಳಿಗೆಯ ಒಳಿತಿಗಾಗಿ ಸಮರೋಪಾದಿಯಲ್ಲಿ ಕೆಲವು ತುರ್ತು ಕ್ರಮಗಳನ್ನು ಕೈಗೊಳ್ಳಬೇಕು. ಯುವಪೀಳಿಗೆಯನ್ನು ಜಾಗೃತಗೊಳಿಸಿ ವಿವಿಧ ಬಗೆಯಲ್ಲಿ ಕ್ರೀಯಾಶೀಲರನ್ನಾಗಿಸಬೇಕು. ಜಲ- ನೆಲ ರಕ್ಷಣೆ, ಪೋಷಣೆಯಂತಹ ವಿಷಯಗಳನ್ನು ವಿದ್ಯಾರ್ಥಿಗಳಿಗೆ ಕಡ್ಡಾಯವಾಗಿ ಬೋಧಿಸಬೇಕು.</p>.<p>ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಭೂಮಿಯ ಸಾಂತ್ವನಕ್ಕೆ ಅವಶ್ಯವಾದ ಕಾನೂನು ರಚಿಸಿ ಕಡ್ಡಾಯವಾಗಿ ಪಾಲಿಸುವಂತೆ ನೋಡಿಕೊಳ್ಳಬೇಕು. ಈ ಕ್ರಮಗಳನ್ನು ಪರಸ್ಪರ ಸಹಕಾರದಿಂದ ಸ್ಫೂರ್ತಿದಾಯಕವಾಗಿ ಪಾಲಿಸಿದಾಗ ಮಾತ್ರ ಉಳಿಗಾಲ. ಇಲ್ಲವಾದರೆ ವಿನಾಶ ತಪ್ಪಿದ್ದಲ್ಲ.</p>.<p><strong>– ಸಿದ್ರಾಮಪ್ಪ ದಿನ್ನಿ, ಬೆಂಗಳೂರು</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕುದಿಯುತ್ತಿದೆ ಭೂಮಿ (ಪ್ರ.ವಾ., ಡಿ. 4) ಮತ್ತು ಮುಂದಿದೆ ಕರಾಳ ದಿನ (ಪ್ರ.ವಾ., ನ. 21) ಸುದ್ದಿಗಳನ್ನು ಓದಿ ಗಾಬರಿಯಾಯಿತು. ಇಂತಹ ದುರದೃಷ್ಟಕರ ಕಾಲವನ್ನು ಮುಂದಿನ ಪೀಳಿಗೆ ಎದುರಿಸಬೇಕಾಗಿ ಬಂದಿರುವುದನ್ನು ತಿಳಿದರೆ ವಿಷಾದವಾಗುತ್ತದೆ. ಮೋಜು- ಮಸ್ತಿ, ಭೋಗವೇ ಜೀವನವೆನ್ನುವ ರೋಗಗ್ರಸ್ತ ಕಾಲವಿದು. ಮನುಷ್ಯನ ಪ್ರಜ್ಞೆ, ಸಂವೇದನಾಶೀಲತೆ ಜಡ್ಡುಗಟ್ಟಿದ ಕಾಲದಲ್ಲಿ ನಾವು ಬದುಕುತ್ತಿದ್ದೇವೆ. ಅದನ್ನು ಸರಿಪಡಿಸಲು ಈಗ ಕೈಗೊಂಡಿರುವ ಕ್ರಮಗಳು ಏನೇನೂ ಸಾಲವು. ಇದು ಕ್ಯಾನ್ಸರ್ ರೋಗಕ್ಕೆ ಆಸ್ಪಿರಿನ್ ಕೊಟ್ಟಂತೆ.</p>.<p>ಕೋಪಿಷ್ಟಳಾದ ಭೂಮಿತಾಯಿಯ ಸಾಂತ್ವನಕ್ಕಾಗಿ ಹಾಗೂ ಮುಂದಿನ ಪೀಳಿಗೆಯ ಒಳಿತಿಗಾಗಿ ಸಮರೋಪಾದಿಯಲ್ಲಿ ಕೆಲವು ತುರ್ತು ಕ್ರಮಗಳನ್ನು ಕೈಗೊಳ್ಳಬೇಕು. ಯುವಪೀಳಿಗೆಯನ್ನು ಜಾಗೃತಗೊಳಿಸಿ ವಿವಿಧ ಬಗೆಯಲ್ಲಿ ಕ್ರೀಯಾಶೀಲರನ್ನಾಗಿಸಬೇಕು. ಜಲ- ನೆಲ ರಕ್ಷಣೆ, ಪೋಷಣೆಯಂತಹ ವಿಷಯಗಳನ್ನು ವಿದ್ಯಾರ್ಥಿಗಳಿಗೆ ಕಡ್ಡಾಯವಾಗಿ ಬೋಧಿಸಬೇಕು.</p>.<p>ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಭೂಮಿಯ ಸಾಂತ್ವನಕ್ಕೆ ಅವಶ್ಯವಾದ ಕಾನೂನು ರಚಿಸಿ ಕಡ್ಡಾಯವಾಗಿ ಪಾಲಿಸುವಂತೆ ನೋಡಿಕೊಳ್ಳಬೇಕು. ಈ ಕ್ರಮಗಳನ್ನು ಪರಸ್ಪರ ಸಹಕಾರದಿಂದ ಸ್ಫೂರ್ತಿದಾಯಕವಾಗಿ ಪಾಲಿಸಿದಾಗ ಮಾತ್ರ ಉಳಿಗಾಲ. ಇಲ್ಲವಾದರೆ ವಿನಾಶ ತಪ್ಪಿದ್ದಲ್ಲ.</p>.<p><strong>– ಸಿದ್ರಾಮಪ್ಪ ದಿನ್ನಿ, ಬೆಂಗಳೂರು</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>