ರೈತರು ಅನುಭವಿಸುತ್ತಿರುವ ತೊಂದರೆ, ತಾಪತ್ರಯ ಒಂದೆರಡಲ್ಲ. ಪ್ರತಿವರ್ಷ ಬಿತ್ತನೆ ಸಮಯದಲ್ಲಿ ರೈತರಿಗೆ ಕಳಪೆ ಬೀಜ ವಿತರಣೆ ಮಾಡುವುದು ಸಾಮಾನ್ಯವಾಗಿದೆ. ಸರ್ಕಾರ ಎಷ್ಟೇ ಕ್ರಮ ಕೈಗೊಂಡರೂ ನಕಲಿ ಬಿತ್ತನೆ ಬೀಜ ವಿತರಣೆಯು ಆಗಾಗ ಬೆಳಕಿಗೆ ಬರುತ್ತಲೇ ಇರುತ್ತದೆ. ಕೆಲವು ಖಾಸಗಿ ಕಂಪನಿಗಳುಕಡಿಮೆ ದರದಲ್ಲಿ ಬಿತ್ತನೆ ಬೀಜ, ರಸಗೊಬ್ಬರ ಮಾರಾಟ ಮಾಡುತ್ತಿವೆ. ಇಂತಹ ಬೀಜಗಳನ್ನು ನಾಟಿ ಮಾಡಿದ ರೈತ ಸರಿಯಾಗಿ ಬೆಳೆ ಬರದೆ ಸಾಲದ ಸುಳಿಗೆ ಸಿಲುಕಿ ಒದ್ದಾಡುವಂತಾಗಿದೆ. ರಾಜ್ಯ ಸರ್ಕಾರ ಮತ್ತು ರಾಜ್ಯ ಬೀಜ ನಿಗಮವು ನಕಲಿ ಬೀಜ ಜಾಲಕ್ಕೆ ಕಡಿವಾಣ ಹಾಕಬೇಕಾಗಿದೆ.