ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಚಕರ ವಾಣಿ | ಸಾರಿಗೆ ಕಟ್ಟಡ: ಸೌರ ವಿದ್ಯುತ್‌ಗೆ ಇರಲಿ ಆದ್ಯತೆ

Last Updated 14 ಜುಲೈ 2020, 19:45 IST
ಅಕ್ಷರ ಗಾತ್ರ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್‌ಆರ್‌ಟಿಸಿ) ಬಸ್‌ಗಳಿಗಾಗಿ ಪ್ರಯಾಣಿಕರು ಕಾಯಲು ಹೋಬಳಿ, ತಾಲ್ಲೂಕು, ಜಿಲ್ಲಾ, ವಿಭಾಗ ಮಟ್ಟದಲ್ಲಿ ಬಸ್ ನಿಲ್ದಾಣಗಳನ್ನು, ಮಹಾನಗರಗಳಲ್ಲಿ ನಗರ ಸಾರಿಗೆ ಬಸ್ ಪ್ರಯಾಣಿಕರಿಗಾಗಿ ತಂಗುದಾಣಗಳನ್ನು ಕಟ್ಟಲಾಗಿದೆ. ಬಸ್‌ಗಳ ರಿಪೇರಿ, ನಿರ್ವಹಣೆಗಾಗಿ ರಾಜ್ಯದಾದ್ಯಂತ ಬಸ್ ಡಿಪೊಗಳನ್ನು ನಿರ್ಮಿಸಲಾಗಿದೆ. ಇವೆಲ್ಲವೂ ಕಾಂಕ್ರೀಟ್‌ ಕಟ್ಟಡಗಳಾಗಿದ್ದು, ಇವುಗಳ ಮೇಲ್ಭಾಗದಲ್ಲಿ ಸೌರ ವಿದ್ಯುತ್ ಉತ್ಪಾದನೆಗೆ ಸಾರಿಗೆ ಇಲಾಖೆ ಮುಂದಾಗುವುದು ವ್ಯಾವಹಾರಿಕವಾಗಿ ಲಾಭದಾಯಕವಾಗುತ್ತದೆ.

ಇಲ್ಲಿ ಉತ್ಪಾದನೆಯಾಗುವ ಸೌರ ವಿದ್ಯುತ್ ಅನ್ನು ನಿಲ್ದಾಣದ ಡಿಪೊಗಳ ನಿರ್ವಹಣೆಗೆ ಬೇಕಾದಷ್ಟು ಬಳಸಿಕೊಂಡು, ಹೆಚ್ಚುವರಿ ವಿದ್ಯುತ್ ಅನ್ನು ವಿದ್ಯುತ್ ನಿಗಮಕ್ಕೆ ಪೂರೈಸಬಹುದು.
-ಬಸವರಾಜ ಹುಡೇದಗಡ್ಡಿ,ಮೈಸೂರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT