ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಚಕರ ವಾಣಿ: ವಿಳಂಬ ನೀತಿಯೂ ಭ್ರಷ್ಟಾಚಾರವೇ

Last Updated 23 ಮೇ 2022, 18:05 IST
ಅಕ್ಷರ ಗಾತ್ರ

ಕಳೆದ ವರ್ಷದ ಫೆಬ್ರುವರಿಯಲ್ಲಿ ನಡೆದ ಎಫ್‌ಡಿಎ ಪರೀಕ್ಷೆಯ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಕರ್ನಾಟಕ ಲೋಕಸೇವಾ ಆಯೋಗವು ಅದೇ ವರ್ಷದ ಸೆಪ್ಟೆಂಬರ್‌ನಲ್ಲಿ ಕೇವಲ ಏಳು ತಿಂಗಳ ಅಂತರದಲ್ಲಿ ಬಿಡುಗಡೆ ಮಾಡಿತ್ತು. ಆದರೆ ಆ ವರ್ಷದ ಸೆಪ್ಟೆಂಬರ್‌ನಲ್ಲಿ ನಡೆದ ಎಸ್‌ಡಿಎ ಹುದ್ದೆಗಳ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಈವರೆಗೂ ಬಿಡುಗಡೆ ಮಾಡದೆ ಮುಂದೂಡುತ್ತಿದೆ. ಇದರ ಹಿಂದಿನ ಉದ್ದೇಶವೇನು ಎಂಬುದು ಅರ್ಥವಾಗುತ್ತಿಲ್ಲ.

ಸುಮಾರು ಎಂಟು ಲಕ್ಷ ವಿದ್ಯಾರ್ಥಿಗಳು ಬರೆದ ಎಸ್ಎಸ್ಎಲ್‌ಸಿ ಪರೀಕ್ಷೆಯ ಮೌಲ್ಯಮಾಪನವನ್ನು ಬರೀ ಒಂದು ತಿಂಗಳಿನಲ್ಲಿ ಪೂರ್ಣಗೊಳಿಸಿ ಫಲಿತಾಂಶವನ್ನು ಪ್ರಕಟಿಸಬಹುದಾದರೆ, ಒಂದೂವರೆ ಲಕ್ಷ ಅಭ್ಯರ್ಥಿಗಳಷ್ಟೇ ಬರೆದಿರುವ ಎಸ್‌ಡಿಎ ಪರೀಕ್ಷಾ ಫಲಿತಾಂಶಕ್ಕಾಗಿ ವರ್ಷಾನುಗಟ್ಟಲೆ ತೆಗೆದುಕೊಳ್ಳುವುದು ಇಚ್ಛಾಶಕ್ತಿಯ ಕೊರತೆಯನ್ನು ತೋರಿಸುತ್ತದೆ. ಇದು ಕೂಡ ಒಂದು ರೀತಿ ಭ್ರಷ್ಟಾಚಾರವೇ ಆಗಿದೆ.
ಸುಜ್ಜಲೂರು ವಿಜಿ,ಟಿ.ನರಸೀಪುರ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT