ಗ್ರಾಮೀಣ ಪ್ರದೇಶಗಳಿಗೆ ಬಸ್ ಬಾರದ ಕಾರಣ ಜನ ತುಂಬಾ ತೊಂದರೆಗೆ ಒಳಗಾಗಿದ್ದಾರೆ. ಖಾಸಗಿ ವಾಹನಗಳು ದುಬಾರಿ ದರವನ್ನು ಕೇಳುತ್ತವೆ. ಇದರಿಂದ ಕೊರೊನಾದಿಂದ ಜನ ಎದುರಿಸುತ್ತಿರುವ ಸಂಕಷ್ಟ ಮತ್ತಷ್ಟು ಹೆಚ್ಚುವಂತಾಗಿದೆ. ನಿಗಮದ ಅಧಿಕಾರಿಗಳು ಇತ್ತ ಗಮನಹರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು.
–ಮಹಾಂತೇಶ ರಾಜಗೋಳಿ,ಬೈಲಹೊಂಗಲ