ಇಷ್ಟಾದರೂ ಅರ್ಜಿ ಸಲ್ಲಿಸಿದ ನಂತರ ಕೊನೆಯಲ್ಲಿ ಮತ್ತೆ ‘ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿದ್ದೀರಾ?’ ಎಂಬ ಪ್ರತ್ಯೇಕ ಕಾಲಂ ಇರುತ್ತದೆ. ಒಂದು ವೇಳೆ ಈ ಕಾಲಂ ಭರ್ತಿ ಮಾಡುವಾಗ ಕಣ್ತಪ್ಪಿನಿಂದಾಗಿ ಬಿಟ್ಟುಹೋದರೆ ಆ ಅಭ್ಯರ್ಥಿ ಮತ್ತೆ ಕಡ್ಡಾಯ ಕನ್ನಡ ಪರೀಕ್ಷೆಗೆ ಹಾಜರಾಗಬೇಕು. ಈ ದ್ವಂದ್ವವನ್ನು ಸಂಬಂಧಪಟ್ಟವರು ಕೂಡಲೇ ಸರಿಪಡಿಸಬೇಕು. ಏಕೆಂದರೆ ಎಲ್ಲಾ ದಾಖಲಾತಿಗಳನ್ನು ಈ ಮೊದಲೇ ಸ್ಕ್ಯಾನ್ ಮಾಡಿ ಸಲ್ಲಿಸಿದ್ದಾಗಿಯೂ ಮತ್ತೆ ಅದೇ ಪ್ರಶ್ನೆ ಕೇಳುವುದು, ಮತ್ತೆ ಪರೀಕ್ಷೆ ಬರೆಸುವುದು ಸಮಂಜಸವಲ್ಲ.
-ವಿಜಯ ಕುಮಾರ್ ಎಸ್. ಸುಜ್ಜಲೂರು, ವಾಟಾಳು, ಟಿ.ನರಸೀಪುರ