ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐಕ್ಯಮಂಟಪ: ಸರ್ಕಾರ ಇತ್ತ ಗಮನಹರಿಸಲಿ

Last Updated 15 ಜನವರಿ 2020, 16:53 IST
ಅಕ್ಷರ ಗಾತ್ರ

800 ವರ್ಷಗಳ ಹಿಂದೆಯೇ ವಿಶ್ವಕ್ಕೆ ಸಮಾನತೆಯ ಸಂದೇಶವನ್ನು ಸಾರಿದವರು ಬಸವಣ್ಣ. ಅನುಭವ ಮಂಟಪದಂತಹ ಅದ್ಭುತ ಕಲ್ಪನೆಯನ್ನು ಸಾಕಾರಗೊಳಿಸಿದವರು. ವಚನ ಸಾಹಿತ್ಯದ ಮೂಲಕ ಜಾತಿ– ಪಂಥ ಭೇದ, ಮೂಢನಂಬಿಕೆಗಳನ್ನು ಹೋಗಲಾಡಿಸಲು ಶ್ರಮಿಸಿದವರು. ಈ ಸಮಾನತೆಯ ಸಂದೇಶ ಸಾರುವ ಹಾದಿಯಲ್ಲಿ ಸಾಗುತ್ತಿರುವ ಬಸವಣ್ಣನವರ ಅನುಯಾಯಿಗಳು ವಿದೇಶಗಳಲ್ಲಿಯೂ ಅವರ ಪ್ರತಿಮೆಗಳನ್ನು ಸ್ಥಾಪಿಸಿದ್ದಾರೆ. ನೋವಿನ ಸಂಗತಿಯೆಂದರೆ, ಬಾಗಲಕೋಟೆ ಜಿಲ್ಲೆಯ ಕೂಡಲಸಂಗಮದಲ್ಲಿರುವ ಬಸವಣ್ಣನವರ ಐಕ್ಯಮಂಟಪದ ಕಂಬಗಳು ಬಿರುಕು ಬಿಟ್ಟಿವೆ. ಸರ್ಕಾರ ಇತ್ತ ಗಮನಹರಿಸಿ, ಐಕ್ಯಮಂಟಪದ ಪುನರ್ ನಿರ್ಮಾಣಕ್ಕೆ ಮುಂದಾಗಬೇಕು.

ಶಂಕರಗೌಡ ಬಿರಾದಾರ, ಮುಳಸಾವಳಗಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT