800 ವರ್ಷಗಳ ಹಿಂದೆಯೇ ವಿಶ್ವಕ್ಕೆ ಸಮಾನತೆಯ ಸಂದೇಶವನ್ನು ಸಾರಿದವರು ಬಸವಣ್ಣ. ಅನುಭವ ಮಂಟಪದಂತಹ ಅದ್ಭುತ ಕಲ್ಪನೆಯನ್ನು ಸಾಕಾರಗೊಳಿಸಿದವರು. ವಚನ ಸಾಹಿತ್ಯದ ಮೂಲಕ ಜಾತಿ– ಪಂಥ ಭೇದ, ಮೂಢನಂಬಿಕೆಗಳನ್ನು ಹೋಗಲಾಡಿಸಲು ಶ್ರಮಿಸಿದವರು. ಈ ಸಮಾನತೆಯ ಸಂದೇಶ ಸಾರುವ ಹಾದಿಯಲ್ಲಿ ಸಾಗುತ್ತಿರುವ ಬಸವಣ್ಣನವರ ಅನುಯಾಯಿಗಳು ವಿದೇಶಗಳಲ್ಲಿಯೂ ಅವರ ಪ್ರತಿಮೆಗಳನ್ನು ಸ್ಥಾಪಿಸಿದ್ದಾರೆ. ನೋವಿನ ಸಂಗತಿಯೆಂದರೆ, ಬಾಗಲಕೋಟೆ ಜಿಲ್ಲೆಯ ಕೂಡಲಸಂಗಮದಲ್ಲಿರುವ ಬಸವಣ್ಣನವರ ಐಕ್ಯಮಂಟಪದ ಕಂಬಗಳು ಬಿರುಕು ಬಿಟ್ಟಿವೆ. ಸರ್ಕಾರ ಇತ್ತ ಗಮನಹರಿಸಿ, ಐಕ್ಯಮಂಟಪದ ಪುನರ್ ನಿರ್ಮಾಣಕ್ಕೆ ಮುಂದಾಗಬೇಕು.