<p>800 ವರ್ಷಗಳ ಹಿಂದೆಯೇ ವಿಶ್ವಕ್ಕೆ ಸಮಾನತೆಯ ಸಂದೇಶವನ್ನು ಸಾರಿದವರು ಬಸವಣ್ಣ. ಅನುಭವ ಮಂಟಪದಂತಹ ಅದ್ಭುತ ಕಲ್ಪನೆಯನ್ನು ಸಾಕಾರಗೊಳಿಸಿದವರು. ವಚನ ಸಾಹಿತ್ಯದ ಮೂಲಕ ಜಾತಿ– ಪಂಥ ಭೇದ, ಮೂಢನಂಬಿಕೆಗಳನ್ನು ಹೋಗಲಾಡಿಸಲು ಶ್ರಮಿಸಿದವರು. ಈ ಸಮಾನತೆಯ ಸಂದೇಶ ಸಾರುವ ಹಾದಿಯಲ್ಲಿ ಸಾಗುತ್ತಿರುವ ಬಸವಣ್ಣನವರ ಅನುಯಾಯಿಗಳು ವಿದೇಶಗಳಲ್ಲಿಯೂ ಅವರ ಪ್ರತಿಮೆಗಳನ್ನು ಸ್ಥಾಪಿಸಿದ್ದಾರೆ. ನೋವಿನ ಸಂಗತಿಯೆಂದರೆ, ಬಾಗಲಕೋಟೆ ಜಿಲ್ಲೆಯ ಕೂಡಲಸಂಗಮದಲ್ಲಿರುವ ಬಸವಣ್ಣನವರ ಐಕ್ಯಮಂಟಪದ ಕಂಬಗಳು ಬಿರುಕು ಬಿಟ್ಟಿವೆ. ಸರ್ಕಾರ ಇತ್ತ ಗಮನಹರಿಸಿ, ಐಕ್ಯಮಂಟಪದ ಪುನರ್ ನಿರ್ಮಾಣಕ್ಕೆ ಮುಂದಾಗಬೇಕು.</p>.<p><strong>ಶಂಕರಗೌಡ ಬಿರಾದಾರ, ಮುಳಸಾವಳಗಿ</strong><br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>800 ವರ್ಷಗಳ ಹಿಂದೆಯೇ ವಿಶ್ವಕ್ಕೆ ಸಮಾನತೆಯ ಸಂದೇಶವನ್ನು ಸಾರಿದವರು ಬಸವಣ್ಣ. ಅನುಭವ ಮಂಟಪದಂತಹ ಅದ್ಭುತ ಕಲ್ಪನೆಯನ್ನು ಸಾಕಾರಗೊಳಿಸಿದವರು. ವಚನ ಸಾಹಿತ್ಯದ ಮೂಲಕ ಜಾತಿ– ಪಂಥ ಭೇದ, ಮೂಢನಂಬಿಕೆಗಳನ್ನು ಹೋಗಲಾಡಿಸಲು ಶ್ರಮಿಸಿದವರು. ಈ ಸಮಾನತೆಯ ಸಂದೇಶ ಸಾರುವ ಹಾದಿಯಲ್ಲಿ ಸಾಗುತ್ತಿರುವ ಬಸವಣ್ಣನವರ ಅನುಯಾಯಿಗಳು ವಿದೇಶಗಳಲ್ಲಿಯೂ ಅವರ ಪ್ರತಿಮೆಗಳನ್ನು ಸ್ಥಾಪಿಸಿದ್ದಾರೆ. ನೋವಿನ ಸಂಗತಿಯೆಂದರೆ, ಬಾಗಲಕೋಟೆ ಜಿಲ್ಲೆಯ ಕೂಡಲಸಂಗಮದಲ್ಲಿರುವ ಬಸವಣ್ಣನವರ ಐಕ್ಯಮಂಟಪದ ಕಂಬಗಳು ಬಿರುಕು ಬಿಟ್ಟಿವೆ. ಸರ್ಕಾರ ಇತ್ತ ಗಮನಹರಿಸಿ, ಐಕ್ಯಮಂಟಪದ ಪುನರ್ ನಿರ್ಮಾಣಕ್ಕೆ ಮುಂದಾಗಬೇಕು.</p>.<p><strong>ಶಂಕರಗೌಡ ಬಿರಾದಾರ, ಮುಳಸಾವಳಗಿ</strong><br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>