‘ಗಡ್ಡಕ್ಕೆ ಬೆಂಕಿ ಬಿದ್ದಿದೆ, ಟೊಂಕ ಕಟ್ಟುವವರಿಲ್ಲ!’ ಎಂಬ ಲೇಖನದಲ್ಲಿ (ಪ್ರ.ವಾ., ಏ. 28) ರವೀಂದ್ರ ಭಟ್ಟ ಅವರು, ‘ನಮ್ಮ ಪ್ರಮುಖ ನಾಯಕರೊಬ್ಬರು ಚುನಾವಣಾ ಪ್ರಚಾರ ಸಭೆಯೊಂದರಲ್ಲಿ ಪಾಲ್ಗೊಂಡು, ಇಷ್ಟೊಂದು ಭಾರೀ ಸಂಖ್ಯೆಯಲ್ಲಿ ಜನ ಸೇರಿರುವುದನ್ನು ಇದೇ ಮೊದಲ ಬಾರಿಗೆ ನೋಡುತ್ತಿದ್ದೇನೆ ಎಂದು ಖುಷಿಯಿಂದ ಹೇಳಿಕೊಂಡರು’ ಎಂದು ಬರೆದಿದ್ದಾರೆ. ಆ ಹೇಳಿಕೆ ಓದಿ, ಅಯ್ಯೋ, ನಾಯಕರಾದವರು ಹೀಗೂ ಇರುತ್ತಾರೆಯೇ ಎಂದು ಅಚ್ಚರಿಯಾಯಿತು, ದುಃಖವಾಯಿತು. ಮಹಾಮಾರಿಯ ಈ ಕಾಲದಲ್ಲಿ ಹಾಗೆಂದವರು ಯಾರು ಎಂದು ಲೇಖನವು ತಿಳಿಸಿಲ್ಲ.