ಸರ್ಕಾರಿ ಕಚೇರಿಗಳಲ್ಲಿ ಕಡತಗಳ ಬೆಟ್ಟ ಕರಗಿಸಿ, ಆಡಳಿತಕ್ಕೆ ಚುರುಕು ಮುಟ್ಟಿಸಬೇಕು ಎಂಬ ಆಶಯ ಹೊಂದಿದ ಸಂಪಾದಕೀಯ (ಪ್ರ.ವಾ., ಫೆ. 25) ಪ್ರಸ್ತುತ ಸ್ಥಿತಿಗೆ ಕನ್ನಡಿ ಹಿಡಿದಿದೆ. ಆಡಳಿತವು ಮಂದಗತಿಯಲ್ಲಿ ಸಾಗುವುದಕ್ಕೆ ನಾನಾ ಕಾರಣಗಳಿರುತ್ತವೆ. ಇವುಗಳಲ್ಲಿ ಪ್ರಮುಖವಾದುದು ಸಿಬ್ಬಂದಿ ಕೊರತೆ. ಇದು, ಎಲ್ಲ ಇಲಾಖೆಗಳಲ್ಲೂ ಇದೆ.