ವಿವಿಧ ಕಾರಣಗಳಿಗೆ ಮುನಿಸಿಕೊಂಡಿರುವ ಬಿಜೆಪಿ ಅತೃಪ್ತರು ಮುಂದಿನ ವಾರ ದೆಹಲಿಗೆ ತೆರಳಲಿದ್ದಾರೆ ಎಂದು ವರದಿಯಾಗಿದೆ (ಪ್ರ.ವಾ., ಫೆ. 26). ಕಾಂಗ್ರೆಸ್– ಜೆಡಿಎಸ್ ಸಮ್ಮಿಶ್ರ ಸರ್ಕಾರ ಅಸ್ತಿತ್ವದಲ್ಲಿ ಇದ್ದಾಗ ಅಲ್ಲಿಯ ಅತೃಪ್ತರ ಚಟುವಟಿಕೆಗಳನ್ನು ಬಿಜೆಪಿ ತನ್ನ ರಾಜಕೀಯಕ್ಕೆ ಬಳಸಿಕೊಂಡಿತು. ಹೀಗಾಗಿ, ಆಗ ಸ್ಥಿರ ಸರ್ಕಾರವಿಲ್ಲದೆ ಕರ್ನಾಟಕ ಬಸವಳಿಯಿತು. ಈಗ ಬಿಜೆಪಿ ನೇತೃತ್ವದ ಸರ್ಕಾರದಲ್ಲೂ ಅತೃಪ್ತರ ಈ ಬಗೆಯ ರೋಗದಿಂದ ಜನ ಕಷ್ಟ ಅನುಭವಿಸುವಂತಾಗಿದೆ.