<p><em><strong>ಕೊರೊನಾ ವೈರಸ್ಸಿಗೆ ಸಂಬಂಧಿಸಿದಂತೆ ಮುಸ್ಲಿಂ ಧರ್ಮದ ವಿಚಾರಗಳನ್ನು ತಿರುಚಿ, ಬಹುಮಾಧ್ಯಮಗಳಲ್ಲಿ ನಡೆಯುತ್ತಿರುವ ಅಪಪ್ರಚಾರವನ್ನು ತಡೆದು, ಅಂಥವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ಸರ್ಕಾರವನ್ನು ಮುಸ್ಲಿಂ ಚಿಂತಕರ ಚಾವಡಿಯುಆಗ್ರಹಿಸುತ್ತದೆ. ಈ ಪತ್ರವು 'ವಾಚಕರವಾಣಿ'ಯಲ್ಲಿ ಏಪ್ರಿಲ್ 6ರಂದು ಪ್ರಕಟವಾಗಿತ್ತು.</strong></em></p>.<p class="rtecenter">---</p>.<p>ಕೊರೊನಾ ವೈರಸ್ ಕಾರಣದಿಂದ ಇಡೀ ದೇಶ ನಲುಗುತ್ತಿದೆ. ಅದರಿಂದ ಪಾರಾಗಲು ದೇಶದ ಜನ ತಮ್ಮ ಜಾತಿ, ಧರ್ಮ, ಭಾಷೆ, ಪ್ರಾಂತ್ಯದ ಭೇದವನ್ನು ಬದಿಗಿಟ್ಟು, ವೈದ್ಯರು ಮತ್ತು ಸರ್ಕಾರದ ಅಗತ್ಯ ಕ್ರಮಗಳಿಗೆ ಸಹಕರಿಸಬೇಕಿದೆ. ಈ ಹೊತ್ತಿನಲ್ಲಿ, ಅತಿಯಾದ ಧಾರ್ಮಿಕ ಶ್ರದ್ಧೆಯುಳ್ಳ ಕೆಲವು ಜನ ಮತ್ತು ಮೂಲಭೂತವಾದಿಗಳು ಹುಂಬತನದಿಂದ ವರ್ತಿಸುತ್ತಾ, ಕೊರೊನಾ ವಿರುದ್ಧದ ಹೋರಾಟಕ್ಕೆ ತೊಡಕನ್ನು ಉಂಟು ಮಾಡುತ್ತಿದ್ದಾರೆ.</p>.<p>ಈ ಬಗೆಯ ಹುಂಬತನ, ಉಡಾಫೆ ತೋರುವವರು ಎಲ್ಲ ಧಾರ್ಮಿಕ ಸಮುದಾಯಗಳಲ್ಲೂ ಇದ್ದಾರೆ. ಇದಕ್ಕೆ ಕಳೆದ 25 ದಿನಗಳಿಂದ ದೇಶದಲ್ಲಿ ನಡೆದಿರುವ ಘಟನೆಗಳು ಸಾಕ್ಷಿ. ಇದನ್ನು ಎಲ್ಲ ಪ್ರಜ್ಞಾವಂತರು ಖಂಡಿಸಬೇಕಿದೆ.</p>.<p>ಇದೇ ಹೊತ್ತಿನಲ್ಲಿ, ಕೆಲವು ಹುಂಬರು ಮತ್ತು ಮೂಲಭೂತವಾದಿಗಳ ಮಾತು ಹಾಗೂ ಕ್ರಿಯೆಗಳನ್ನು ಇಡಿಯಾಗಿ ಒಂದು ಸಮುದಾಯದ ತಲೆಗೆ ಕಟ್ಟುವ, ಅದರ ವಿರುದ್ಧ ವ್ಯವಸ್ಥಿತವಾಗಿ ದ್ವೇಷವನ್ನು ಹಬ್ಬಿಸುವ ಕೆಲಸದಲ್ಲಿ ಕೆಲವರು ತೊಡಗಿದ್ದಾರೆ. ಕೆಲವು ಮಾಧ್ಯಮಗಳು ಸಹ ಈ ಕೆಲಸವನ್ನು ಮಾಡುತ್ತಿವೆ. ಇದು ತಪ್ಪು ಮತ್ತು ಅಪಾಯಕರ. ವ್ಯಕ್ತಿ ಅಥವಾ ಗುಂಪಿನವರು ಯಾವುದೇ ಧಾರ್ಮಿಕ ಸಮುದಾಯಕ್ಕೆ ಸೇರಿರಲಿ, ಅವರು ಮಾಡುವ ತಪ್ಪುಗಳನ್ನು ಎಲ್ಲರೂ ಖಂಡಿಸಬೇಕಿದೆ. ಜಾತಿ ಮತಾತೀತವಾಗಿ ಈ ಬಿಕ್ಕಟ್ಟಿನ ಸನ್ನಿವೇಶವನ್ನು ಒಗ್ಗಟ್ಟಾಗಿ ಎದುರಿಸಬೇಕಿದೆ. ಭಾರತವು ಕಷ್ಟಕರವಾದ ಈ ಯುದ್ಧದಲ್ಲಿ ಗೆಲುವನ್ನು ಸಾಧಿಸುತ್ತದೆ ಎಂದು ನಾವು ನಂಬಿದ್ದೇವೆ.</p>.<p>ಈ ವಿಷಯದಲ್ಲಿ ಮುಸ್ಲಿಂ ಚಿಂತಕರ ಚಾವಡಿಯು ಸರ್ಕಾರವು ಕೈಗೊಳ್ಳುವ ಎಲ್ಲ ಉಪಯುಕ್ತ ಕ್ರಮಗಳನ್ನು ಬೆಂಬಲಿಸುತ್ತದೆ. ಸಹನೆಯಿಂದ, ವಿವೇಕದಿಂದ ಈ ಸನ್ನಿವೇಶವನ್ನು ಎದುರಿಸಬೇಕೆಂದು ಮುಸ್ಲಿಂ ಸಮುದಾಯಕ್ಕೆ ವಿನಂತಿಸುತ್ತದೆ. ಕೊರೊನಾ ವೈರಸ್ಸಿಗೆ ಸಂಬಂಧಿಸಿದಂತೆ ಮುಸ್ಲಿಂ ಧರ್ಮದ ವಿಚಾರಗಳನ್ನು ತಿರುಚಿ, ಬಹುಮಾಧ್ಯಮಗಳಲ್ಲಿ ನಡೆಯುತ್ತಿರುವ ಅಪಪ್ರಚಾರವನ್ನು ತಡೆದು, ಅಂಥವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ಸರ್ಕಾರವನ್ನು ಆಗ್ರಹಿಸುತ್ತದೆ.</p>.<p><em><strong>ಡಾ. ರಹಮತ್ ತರೀಕೆರೆ, ಡಾ. ಮುಜಾಪ್ಫರ್ ಅಸ್ಸಾದಿ, ರಂಜಾನ್ ದರ್ಗಾ, ಅಬ್ದುಸ್ಸಲಾಂ ಪುತ್ತಿಗೆ,</strong></em><em><strong>ಬಾನು ಮುಷ್ತಾಕ್, ಬಿ.ಪೀರ್ಬಾಷ, ಮುನೀರ್ ಕಾಟಿಪಳ್ಳ, ಅನೀಸ್ ಪಾಶಾ, ಜೆ.ಕಲೀಂಬಾಷಾ,</strong></em><em><strong>ಡಾ. ಸಿರಾಜ್ ಅಹಮ್ಮದ್, ಡಾ. ರಜಾಕ್ ಉಸ್ತಾದ್, ಇಮಾಮ್ ಗೋಡೆಕಾರ, ಡಾ. ಶಾಕಿರಾ ಖಾನಂ</strong></em></p>.<p><strong>(ನೀವೂ ಪ್ರತಿಕ್ರಿಯಿಸಿ: editpage@prajavani.co.in)</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><em><strong>ಕೊರೊನಾ ವೈರಸ್ಸಿಗೆ ಸಂಬಂಧಿಸಿದಂತೆ ಮುಸ್ಲಿಂ ಧರ್ಮದ ವಿಚಾರಗಳನ್ನು ತಿರುಚಿ, ಬಹುಮಾಧ್ಯಮಗಳಲ್ಲಿ ನಡೆಯುತ್ತಿರುವ ಅಪಪ್ರಚಾರವನ್ನು ತಡೆದು, ಅಂಥವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ಸರ್ಕಾರವನ್ನು ಮುಸ್ಲಿಂ ಚಿಂತಕರ ಚಾವಡಿಯುಆಗ್ರಹಿಸುತ್ತದೆ. ಈ ಪತ್ರವು 'ವಾಚಕರವಾಣಿ'ಯಲ್ಲಿ ಏಪ್ರಿಲ್ 6ರಂದು ಪ್ರಕಟವಾಗಿತ್ತು.</strong></em></p>.<p class="rtecenter">---</p>.<p>ಕೊರೊನಾ ವೈರಸ್ ಕಾರಣದಿಂದ ಇಡೀ ದೇಶ ನಲುಗುತ್ತಿದೆ. ಅದರಿಂದ ಪಾರಾಗಲು ದೇಶದ ಜನ ತಮ್ಮ ಜಾತಿ, ಧರ್ಮ, ಭಾಷೆ, ಪ್ರಾಂತ್ಯದ ಭೇದವನ್ನು ಬದಿಗಿಟ್ಟು, ವೈದ್ಯರು ಮತ್ತು ಸರ್ಕಾರದ ಅಗತ್ಯ ಕ್ರಮಗಳಿಗೆ ಸಹಕರಿಸಬೇಕಿದೆ. ಈ ಹೊತ್ತಿನಲ್ಲಿ, ಅತಿಯಾದ ಧಾರ್ಮಿಕ ಶ್ರದ್ಧೆಯುಳ್ಳ ಕೆಲವು ಜನ ಮತ್ತು ಮೂಲಭೂತವಾದಿಗಳು ಹುಂಬತನದಿಂದ ವರ್ತಿಸುತ್ತಾ, ಕೊರೊನಾ ವಿರುದ್ಧದ ಹೋರಾಟಕ್ಕೆ ತೊಡಕನ್ನು ಉಂಟು ಮಾಡುತ್ತಿದ್ದಾರೆ.</p>.<p>ಈ ಬಗೆಯ ಹುಂಬತನ, ಉಡಾಫೆ ತೋರುವವರು ಎಲ್ಲ ಧಾರ್ಮಿಕ ಸಮುದಾಯಗಳಲ್ಲೂ ಇದ್ದಾರೆ. ಇದಕ್ಕೆ ಕಳೆದ 25 ದಿನಗಳಿಂದ ದೇಶದಲ್ಲಿ ನಡೆದಿರುವ ಘಟನೆಗಳು ಸಾಕ್ಷಿ. ಇದನ್ನು ಎಲ್ಲ ಪ್ರಜ್ಞಾವಂತರು ಖಂಡಿಸಬೇಕಿದೆ.</p>.<p>ಇದೇ ಹೊತ್ತಿನಲ್ಲಿ, ಕೆಲವು ಹುಂಬರು ಮತ್ತು ಮೂಲಭೂತವಾದಿಗಳ ಮಾತು ಹಾಗೂ ಕ್ರಿಯೆಗಳನ್ನು ಇಡಿಯಾಗಿ ಒಂದು ಸಮುದಾಯದ ತಲೆಗೆ ಕಟ್ಟುವ, ಅದರ ವಿರುದ್ಧ ವ್ಯವಸ್ಥಿತವಾಗಿ ದ್ವೇಷವನ್ನು ಹಬ್ಬಿಸುವ ಕೆಲಸದಲ್ಲಿ ಕೆಲವರು ತೊಡಗಿದ್ದಾರೆ. ಕೆಲವು ಮಾಧ್ಯಮಗಳು ಸಹ ಈ ಕೆಲಸವನ್ನು ಮಾಡುತ್ತಿವೆ. ಇದು ತಪ್ಪು ಮತ್ತು ಅಪಾಯಕರ. ವ್ಯಕ್ತಿ ಅಥವಾ ಗುಂಪಿನವರು ಯಾವುದೇ ಧಾರ್ಮಿಕ ಸಮುದಾಯಕ್ಕೆ ಸೇರಿರಲಿ, ಅವರು ಮಾಡುವ ತಪ್ಪುಗಳನ್ನು ಎಲ್ಲರೂ ಖಂಡಿಸಬೇಕಿದೆ. ಜಾತಿ ಮತಾತೀತವಾಗಿ ಈ ಬಿಕ್ಕಟ್ಟಿನ ಸನ್ನಿವೇಶವನ್ನು ಒಗ್ಗಟ್ಟಾಗಿ ಎದುರಿಸಬೇಕಿದೆ. ಭಾರತವು ಕಷ್ಟಕರವಾದ ಈ ಯುದ್ಧದಲ್ಲಿ ಗೆಲುವನ್ನು ಸಾಧಿಸುತ್ತದೆ ಎಂದು ನಾವು ನಂಬಿದ್ದೇವೆ.</p>.<p>ಈ ವಿಷಯದಲ್ಲಿ ಮುಸ್ಲಿಂ ಚಿಂತಕರ ಚಾವಡಿಯು ಸರ್ಕಾರವು ಕೈಗೊಳ್ಳುವ ಎಲ್ಲ ಉಪಯುಕ್ತ ಕ್ರಮಗಳನ್ನು ಬೆಂಬಲಿಸುತ್ತದೆ. ಸಹನೆಯಿಂದ, ವಿವೇಕದಿಂದ ಈ ಸನ್ನಿವೇಶವನ್ನು ಎದುರಿಸಬೇಕೆಂದು ಮುಸ್ಲಿಂ ಸಮುದಾಯಕ್ಕೆ ವಿನಂತಿಸುತ್ತದೆ. ಕೊರೊನಾ ವೈರಸ್ಸಿಗೆ ಸಂಬಂಧಿಸಿದಂತೆ ಮುಸ್ಲಿಂ ಧರ್ಮದ ವಿಚಾರಗಳನ್ನು ತಿರುಚಿ, ಬಹುಮಾಧ್ಯಮಗಳಲ್ಲಿ ನಡೆಯುತ್ತಿರುವ ಅಪಪ್ರಚಾರವನ್ನು ತಡೆದು, ಅಂಥವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ಸರ್ಕಾರವನ್ನು ಆಗ್ರಹಿಸುತ್ತದೆ.</p>.<p><em><strong>ಡಾ. ರಹಮತ್ ತರೀಕೆರೆ, ಡಾ. ಮುಜಾಪ್ಫರ್ ಅಸ್ಸಾದಿ, ರಂಜಾನ್ ದರ್ಗಾ, ಅಬ್ದುಸ್ಸಲಾಂ ಪುತ್ತಿಗೆ,</strong></em><em><strong>ಬಾನು ಮುಷ್ತಾಕ್, ಬಿ.ಪೀರ್ಬಾಷ, ಮುನೀರ್ ಕಾಟಿಪಳ್ಳ, ಅನೀಸ್ ಪಾಶಾ, ಜೆ.ಕಲೀಂಬಾಷಾ,</strong></em><em><strong>ಡಾ. ಸಿರಾಜ್ ಅಹಮ್ಮದ್, ಡಾ. ರಜಾಕ್ ಉಸ್ತಾದ್, ಇಮಾಮ್ ಗೋಡೆಕಾರ, ಡಾ. ಶಾಕಿರಾ ಖಾನಂ</strong></em></p>.<p><strong>(ನೀವೂ ಪ್ರತಿಕ್ರಿಯಿಸಿ: editpage@prajavani.co.in)</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>