ಸಂವಿಧಾನ ಸಭೆಯು ಭಾರತದ ಸಂವಿಧಾನವನ್ನು ಅಂಗೀಕರಿಸಿ 70 ವರ್ಷ ಸಂದಿದೆ. ಭಾರತಕ್ಕೆ ಸಾವಿರಾರು ವರ್ಷಗಳ ಇತಿಹಾಸವಿದೆ. ಆದರೆ, ದಲಿತರು ಹಾಗೂ ಹಿಂದುಳಿದವರ ಪರವಾದ ಕಾಳಜಿಗೆ ಅಷ್ಟು ಇತಿಹಾಸವಿಲ್ಲ. ಸಾವಿರಾರು ವರ್ಷಗಳಿಂದಲೂ ಅವರು ಶೋಷಣೆಗೆ ಒಳಗಾಗುತ್ತಲೇ ಬಂದಿದ್ದಾರೆ. ಅವರಿಗೆ ಸಾಮಾಜಿಕ ನ್ಯಾಯ ದೊರಕುತ್ತಿರುವುದು ತೀರಾ ಇತ್ತೀಚೆಗೆ. ಇನ್ನೂ ಸಿಗಬೇಕಾಗಿರುವುದು ಬಹಳಷ್ಟಿದೆ. ರಾಜಕೀಯವಾಗಿ, ಆರ್ಥಿಕವಾಗಿ, ಸಾಮಾಜಿಕವಾಗಿ ಅವರು ಇನ್ನೂ ಬೆಳೆಯಬೇಕಾಗಿದೆ. ನಮ್ಮ ಸಂವಿಧಾನದ ಆಶಯಗಳ ಮೇಲೆ ನಮ್ಮ ಸಾಮಾಜಿಕ ಮೌಲ್ಯಗಳು ನಿಂತಿವೆ ಎಂಬುದನ್ನು ಎಲ್ಲರೂ ಅರಿಯಬೇಕಾಗಿದೆ.