ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇನ್ನೂ ಸಿಗಬೇಕಿರುವುದು ಬಹಳಷ್ಟಿದೆ

Last Updated 26 ನವೆಂಬರ್ 2019, 19:24 IST
ಅಕ್ಷರ ಗಾತ್ರ

ಸಂವಿಧಾನ ಸಭೆಯು ಭಾರತದ ಸಂವಿಧಾನವನ್ನು ಅಂಗೀಕರಿಸಿ 70 ವರ್ಷ ಸಂದಿದೆ. ಭಾರತಕ್ಕೆ ಸಾವಿರಾರು ವರ್ಷಗಳ ಇತಿಹಾಸವಿದೆ. ಆದರೆ, ದಲಿತರು ಹಾಗೂ ಹಿಂದುಳಿದವರ ಪರವಾದ ಕಾಳಜಿಗೆ ಅಷ್ಟು ಇತಿಹಾಸವಿಲ್ಲ. ಸಾವಿರಾರು ವರ್ಷಗಳಿಂದಲೂ ಅವರು ಶೋಷಣೆಗೆ ಒಳಗಾಗುತ್ತಲೇ ಬಂದಿದ್ದಾರೆ. ಅವರಿಗೆ ಸಾಮಾಜಿಕ ನ್ಯಾಯ ದೊರಕುತ್ತಿರುವುದು ತೀರಾ ಇತ್ತೀಚೆಗೆ. ಇನ್ನೂ ಸಿಗಬೇಕಾಗಿರುವುದು ಬಹಳಷ್ಟಿದೆ. ರಾಜಕೀಯವಾಗಿ, ಆರ್ಥಿಕವಾಗಿ, ಸಾಮಾಜಿಕವಾಗಿ ಅವರು ಇನ್ನೂ ಬೆಳೆಯಬೇಕಾಗಿದೆ. ನಮ್ಮ ಸಂವಿಧಾನದ ಆಶಯಗಳ ಮೇಲೆ ನಮ್ಮ ಸಾಮಾಜಿಕ ಮೌಲ್ಯಗಳು ನಿಂತಿವೆ ಎಂಬುದನ್ನು ಎಲ್ಲರೂ ಅರಿಯಬೇಕಾಗಿದೆ.

-ರಾಜಶೇಖರ ಎಸ್. ಗುಬ್ಬಿ, ಮನಗೂಳಿ, ಬಸವನಬಾಗೇವಾಡಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT