ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೊಲೀಸರ ಪ್ರಭಾವ: ಏನಿದರ ರಹಸ್ಯ?

ಅಕ್ಷರ ಗಾತ್ರ

ಮಂಗಳೂರಿನಲ್ಲಿ ವಂಚನೆ ಪ್ರಕರಣವೊಂದರಲ್ಲಿ ವಶಕ್ಕೆ ಪಡೆದಿದ್ದ ಐಷಾರಾಮಿ ಕಾರು ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪೊಲೀಸ್ ಅಧಿಕಾರಿಗಳು ಅಮಾನತುಗೊಂಡಿದ್ದಾರೆ. ಇದರೊಂದಿಗೆ ಪೊಲೀಸ್
ವ್ಯವಸ್ಥೆಯಲ್ಲಿ ಡಕಾಯಿತಿ, ಸುಲಿಗೆ ಮನಃಸ್ಥಿತಿಯ ಕೆಲವು ಅಧಿಕಾರಿಗಳು ಇದ್ದಾರೆಂಬುದು ಮತ್ತೊಮ್ಮೆ ಮಗದೊಮ್ಮೆ ಸಾಬೀತಾಗುತ್ತಲೇ ಇದೆ.

ಈ ಹಿಂದೆ ಕೂಡ ಇಂಥದ್ದೇ ಕೃತ್ಯವನ್ನು ಹೋಲುವ ಹಲವಾರು ಪ್ರಕರಣಗಳು ಪೊಲೀಸ್ ಅಧಿಕಾರಿಗಳಿಂದ ನಡೆದಿರುವುದು ಬೆಳಕಿಗೆ ಬಂದಿದ್ದವು. ವ್ಯವಸ್ಥೆಯಲ್ಲಿ ದಕ್ಷತೆ ಕುಸಿದಿರುವುದು ಮತ್ತು ಏನು ಮಾಡಿದರೂ ಹಣ, ಪ್ರಭಾವ ಬಳಸಿ ಪಾರಾಗಬಹುದು ಎಂಬ ಬಲವಾದ ನಂಬಿಕೆ ಹುಸಿಯಾಗದಿರುವುದೇ ಈ ರೀತಿಯ ಪ್ರಕರಣಗಳ ಹೆಚ್ಚಳಕ್ಕೆ ಕಾರಣವಾಗಿರಬಹುದು. ಹೆಚ್ಚಿನ ಪ್ರಕರಣಗಳಲ್ಲಿ ಆರೋಪಿಗಳಿಗೆ ಶಿಕ್ಷೆಯಾದ ಉದಾಹರಣೆಗಳೇ ಇಲ್ಲ. ಏನಿದರ ರಹಸ್ಯ?

-ರಿಪ್ಪನ್‌ಪೇಟೆ ನಟರಾಜ್,ಬೆಂಗಳೂರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT