ಯಾವ ಯಾವ ಸಮುದಾಯಗಳು ಆರ್ಥಿಕ,ಶೈಕ್ಷಣಿಕ ಮತ್ತು ರಾಜಕೀಯ ರಂಗಗಳಲ್ಲಿ ಹಿಂದುಳಿದಿವೆ ಮತ್ತು ಮುಂದುವರಿದಿವೆ ಎಂಬ ನಿಜಾಂಶ ಈ ವರದಿಯಿಂದ ಹೊರಬೀಳುತ್ತದೆ. ಆಗ ನಿಜಕ್ಕೂ ಹಿಂದುಳಿದ ಸಮುದಾಯಗಳಿಗೆ ವೈಜ್ಞಾನಿಕವಾಗಿ ಮೀಸಲಾತಿಯನ್ನು ಪುನರ್ ನಿಗದಿಗೊಳಿಸಲು ಮತ್ತು ಪ್ರವರ್ಗಗಳನ್ನು ಹೊಸದಾಗಿ ಕಲ್ಪಿಸಲು ಅನುಕೂಲವಾಗುತ್ತದೆ. ಆ ಮೂಲಕ, ಈಗ ಎದ್ದಿರುವ ಮೀಸಲಾತಿ ಬೇಡಿಕೆಯ ಹೋರಾಟಕ್ಕೆ ಸೂಕ್ತ ಉತ್ತರ ಕಂಡುಕೊಳ್ಳಲು ಸಾಧ್ಯವಾಗುತ್ತದೆ. ಹಾಗಾಗಿ ಜಾತಿ ಜನಗಣತಿ ವರದಿಯನ್ನು ಸರ್ಕಾರ ಶೀಘ್ರವೇ ಬಹಿರಂಗಪಡಿಸಿ, ಈಗ ಸೃಷ್ಟಿಯಾಗಿರುವ ಮೀಸಲಾತಿಯ ಗೊಂದಲಕ್ಕೆ ತೆರೆ ಎಳೆಯುವುದು ಸಮಂಜಸ.