ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಅತಿಥಿ ಸಚಿವ’ರಾಗುವುದು ಬೇಡ

ಅಕ್ಷರ ಗಾತ್ರ

ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ, ಪುನರ್‌ರಚನೆಯ ಮಾತುಗಳು ಕೇಳಿಬರುತ್ತಿರುವ ಬೆನ್ನಲ್ಲೇ ಜಿಲ್ಲಾ ಉಸ್ತು ವಾರಿ ಸಚಿವರ ನೇಮಕವಾಗಿದೆ. ಬಹುತೇಕ ಸಚಿವರನ್ನು ತಮ್ಮ ತವರು ಜಿಲ್ಲೆಗಳನ್ನು ಬಿಟ್ಟು ಬೇರೆ ಜಿಲ್ಲೆಗಳಿಗೆ ನೇಮಕ ಮಾಡಲಾಗಿದೆ. ರಾಜಕೀಯ ಸಂಘರ್ಷ ಏರ್ಪಡಬಾರದು ಎಂಬ ಕಾರಣದಿಂದ ಮುಖ್ಯಮಂತ್ರಿ ಈ ನಿರ್ಧಾರತೆಗೆದುಕೊಂಡಿದ್ದರೂ, ಅಭಿವೃದ್ಧಿ ವಿಚಾರವಾಗಿ ಇದು ಸೂಕ್ತ ನಿರ್ಧಾರವಲ್ಲ. ಬೇರೆ ಜಿಲ್ಲೆಗಳ ಸಚಿವರನ್ನು ಉಸ್ತುವಾರಿಯಾಗಿ ನೇಮಕ ಮಾಡುವುದರಿಂದ ಉಸ್ತುವಾರಿ ವಹಿಸಿಕೊಂಡ ಜಿಲ್ಲೆಗಳಲ್ಲಿ ಆ ಸಚಿವರು ಯಾವುದೇ ಸಭೆಗಳನ್ನು ನಡೆಸದೆ, ಜಿಲ್ಲೆಗೆ ಅಗತ್ಯಾನುಸಾರ ಭೇಟಿ ಕೊಡದೆ, ಸರ್ಕಾರಿ ಅಧಿಕಾರಿಗಳ ಸಭೆ ನಡೆಸದೇ ಇರುವುದ ರಿಂದ ಅಭಿವೃದ್ಧಿ ಕಾಮಗಾರಿಗಳು ಚುರುಕು ಪಡೆಯುವುದಿಲ್ಲ. ಈ ಕುರಿತು ಈಗಾಗಲೇ ಸಾರ್ವಜನಿಕರು ಅನೇಕ ಬಾರಿ ಅಸಮಾಧಾನ ವನ್ನು ವ್ಯಕ್ತಪಡಿಸಿದ್ದಾರೆ.

ಕೋವಿಡ್ ಕಾಲಘಟ್ಟದ ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಪಾತ್ರ ಮಹತ್ವದ್ದಾಗಿರುತ್ತದೆ. ಕೋವಿಡ್ ನಿರ್ವಹಣೆ ಮತ್ತು ಪೂರ್ವಸಿದ್ಧತೆ ಕುರಿತ ಮೇಲ್ವಿಚಾರಣೆಗಾಗಿ ಸಚಿವರು ಆಗಾಗ ಆಯಾ ಜಿಲ್ಲೆಗಳಿಗೆ ಭೇಟಿ ನೀಡಬೇಕಾ ಗುತ್ತದೆ. ಅಲ್ಲಿನ ಕುಂದುಕೊರತೆಗಳನ್ನು ಆಲಿಸಬೇಕಾಗುತ್ತದೆ. ಆದರೆ ಈ ಹಿಂದಿನ ಬಹುತೇಕ ಸಚಿವರು ಆ ಕೆಲಸ ವನ್ನು ಮಾಡಿಲ್ಲ. ಅದಕ್ಕೆ ಮುಖ್ಯ ಕಾರಣ ಅವರು ಆ ಜಿಲ್ಲೆಯವರಲ್ಲ ಎಂಬುದು. ಹೀಗಾಗಿ ಮುಖ್ಯಮಂತ್ರಿ ಈ ಬಾರಿ ಆಯಾ ಜಿಲ್ಲೆಗಳ ಜನಪ್ರತಿನಿಧಿಗಳನ್ನೇ ಆಯಾ ಜಿಲ್ಲಾ ಉಸ್ತುವಾರಿಗಳನ್ನಾಗಿ ನೇಮಿಸಬೇಕಿತ್ತು. ಇಲ್ಲವಾದಲ್ಲಿಆಗೊಮ್ಮೆ-ಈಗೊಮ್ಮೆ ಭೇಟಿ ಕೊಡುವ ಮೂಲಕ ಅತಿಥಿ ಸಚಿವರಾಗುವ ಸಂಪ್ರದಾಯಕ್ಕೆ ತಿಲಾಂಜಲಿ ನೀಡುವಂತೆ ಖಡಕ್ ಸೂಚನೆ ನೀಡಬೇಕಿದೆ.

- ಬೇ.ನ.ಶ್ರೀನಿವಾಸಮೂರ್ತಿ,ತುಮಕೂರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT