ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಇತ್ತೀಚೆಗೆ ಮಂಡಿಸಿದ ಬಜೆಟ್ಗಳಲ್ಲಿ ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ ವಿವಿಧ ಯೋಜನೆಗಳನ್ನು ಪ್ರಸ್ತಾಪಿಸಲಾಗಿದೆ. ಇವೆಲ್ಲ ಸ್ವಾಗತಾರ್ಹ ವಿಚಾರಗಳೇ. ಆದರೆ, ಎಲ್ಲೂ ಆಯುರ್ವೇದ ಮತ್ತು ನಿಸರ್ಗ ಚಿಕಿತ್ಸೆಗೆ ಸಂಬಂಧಿಸಿದಂತೆ ಹೊಸ ಯೋಜನೆಗಳು, ಹೊಸ ಕಾರ್ಯಕ್ರಮಗಳ ಪ್ರಸ್ತಾಪ ಇಲ್ಲದಿರುವುದು ಆಶ್ಚರ್ಯಕರ. ಈ ಪದ್ಧತಿಗಳು ಈಗಾಗಲೇ ಜನಪ್ರಿಯವಾಗಿವೆ. ಇವುಗಳಿಂದ ಪರಿಣಾಮಕಾರಿ ಚಿಕಿತ್ಸೆಗಳೂ ಲಭ್ಯವಾಗಿವೆ. ರೋಗ ಬಂದ ಬಳಿಕ ಚಿಕಿತ್ಸೆಗೊಳಪಡುವ ಬದಲು, ಮೊದಲೇ ಆರೋಗ್ಯಕರ ಜೀವನ ಪದ್ಧತಿಗಳನ್ನು ಅಳವಡಿಸಿಕೊಳ್ಳುವಲ್ಲೂ ನಿಸರ್ಗ ಚಿಕಿತ್ಸೆ ಪರಿಣಾಮಕಾರಿ. ಹೀಗಿದ್ದೂ ಸರ್ಕಾರಗಳು ಇವೆರಡೂ ಕ್ಷೇತ್ರಗಳನ್ನು ಉತ್ತೇಜಿಸದಿರುವುದು ವಿಷಾದನೀಯ.