‘ಉತ್ತರಪ್ರದೇಶದ ಮಾದರಿಯಲ್ಲಿ ಬುಲ್ಡೋಜರ್ ಅಸ್ತ್ರವನ್ನು ಪ್ರಯೋಗಿಸುವಂತಹ ಪರಿಸ್ಥಿತಿ ರಾಜ್ಯದಲ್ಲಿ ಇಲ್ಲ. ಕರ್ನಾಟಕದಲ್ಲಿ ಸಂವಿಧಾನ ಹಾಗೂ ಕಾನೂನುಗಳ ಪಾಲನೆ ನಡೆಯುತ್ತಿದೆ. ದೇಶದ ಕಾನೂನು ಎಲ್ಲರಿಗೂ ಒಂದೇ’ ಎಂದು ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡುವಾಗ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ (ಪ್ರ.ವಾ., ಜೂನ್ 15). ಹಾಗಾದರೆ ಉತ್ತರಪ್ರದೇಶದ ಯೋಗಿ ಆದಿತ್ಯನಾಥ ನೇತೃತ್ವದ ಬಿಜೆಪಿ ಸರ್ಕಾರ ಸಂವಿಧಾನ ಹಾಗೂ ಕಾನೂನುಗಳನ್ನು ಪಾಲನೆ ಮಾಡುತ್ತಿಲ್ಲ ಎಂಬುದು ತಾನೇ ಇದರರ್ಥ?