ಚುನಾವಣೆ ಸಂದರ್ಭದಲ್ಲಿ ಆಡಳಿತಾರೂಢ ಬಿಜೆಪಿ ಮುಖಂಡರು ‘ಡಬಲ್ ಎಂಜಿನ್’ ಸರ್ಕಾರದ ಬಗ್ಗೆ ಪದೇ ಪದೇ ಹೇಳುತ್ತಾರೆ. ಕೇಂದ್ರ ಮತ್ತು ರಾಜ್ಯದಲ್ಲಿ ಒಂದೇ ಪಕ್ಷದ ನೇತೃತ್ವದ ಸರ್ಕಾರ ಇದ್ದರೆ ಆಗುವ ಪ್ರಯೋಜನ ಏನು ಎಂಬುದನ್ನು ಇಂತಹ ಕಷ್ಟದ ಸಂದರ್ಭದಲ್ಲಾದರೂ ತೋರಿಸಬೇಕು. ಬರೀ ಮಾತು, ಘೋಷಣೆಗಳಿಂದ ಜನರಿಗೆ ಪ್ರಯೋಜನ ಇಲ್ಲ. ಹೆಚ್ಚಿನ ನೆರವು ಪಡೆಯಲು ಮುಖ್ಯಮಂತ್ರಿಯವರು ಕೇಂದ್ರದ ಮೇಲೆ ಒತ್ತಡ ಹೇರಬೇಕು.