ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಕ್ಷಣದಲ್ಲೂ ಬರದ ಛಾಯೆ?

Last Updated 15 ಏಪ್ರಿಲ್ 2019, 19:02 IST
ಅಕ್ಷರ ಗಾತ್ರ

ಈ ಬಾರಿರ ದ್ವಿತೀಯ ಪಿಯು ಫಲಿತಾಂಶದಲ್ಲಿ ಚಿತ್ರದುರ್ಗ ಜಿಲ್ಲೆಯು ಕೊನೆಯ ಸ್ಥಾನಕ್ಕೆ ಕುಸಿದಿರುವುದು ಆಘಾತಕಾರಿ. ಪ್ರತಿವರ್ಷ 22 ಅಥವಾ 23ನೇ ಸ್ಥಾನದಲ್ಲಿ ಇರುತ್ತಿದ್ದ ಜಿಲ್ಲೆಯು ಈ ಬಾರಿ ತೀರಾ ಕಳಪೆ ಮಟ್ಟದಲ್ಲಿ ಫಲಿತಾಂಶ ದಾಖಲಿಸಿದೆ.

ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಇದನ್ನು ಗಂಭೀರವಾಗಿ ಪರಿಗಣಿಸಬೇಕಾದ ಅಗತ್ಯವಿದೆ. ಜಿಲ್ಲೆಗೆ ಮಳೆಯ ಕೊರತೆಯಿಂದ ಬರದ ನಾಡು ಎಂಬ ಹೆಸರಿದೆ. ಹಾಗೆಂದು ಪ್ರತಿ ಕ್ಷೇತ್ರದಲ್ಲೂ ‘ಬರ’ದ ಛಾಯೆಯನ್ನೇ ಕಾಣುವಂತೆ ಆಗಬಾರದು. ಮುಂದಿನ ದಿನಗಳಲ್ಲಿ ಉತ್ತಮ ಫಲಿತಾಂಶ ಗಿಟ್ಟಿಸಿಕೊಳ್ಳಲು ಜಿಲ್ಲಾಡಳಿತ ಹಾಗೂ ಶಿಕ್ಷಣ ಇಲಾಖೆ ಗಮನಹರಿಸಬೇಕಿದೆ.

ಹನುಮೇಶ್ ಎಂ. ಭೀಮನಕೆರೆ, ಚಿತ್ರದುರ್ಗ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT