ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ, ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳಿಗೆ ನಡೆಯಲಿರುವ ಚುನಾವಣೆಗಳಲ್ಲಿ ಸರ್ಕಾರಿ ನೌಕರರು ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸಿರುವ ಬಗ್ಗೆ ಪ್ರೊ. ಮಲ್ಲಿಕಾರ್ಜುನ ಕಲಮರಹಳ್ಳಿ ಆತಂಕ ವ್ಯಕ್ತಪಡಿಸಿದ್ದಾರೆ (ವಾ.ವಾ., ಅ. 17). ನಾಗರಿಕ ಸೇವಾ ನಿಯಮಗಳಲ್ಲಿ ಇದಕ್ಕೆ ಅವಕಾಶವಿಲ್ಲ ಎಂದು ಹೇಳಿದ್ದಾರೆ. ಈ ಹಿಂದೆ ಸರ್ಕಾರಿ ನೌಕರರು ಬರವಣಿಗೆಯಲ್ಲಿ, ಸಿನಿಮಾ, ನಾಟಕಗಳಲ್ಲಿ ತೊಡಗಿಕೊಳ್ಳುವುದಕ್ಕೆ ಅಡ್ಡಿ ಇರಲಿಲ್ಲ. ಅದರಿಂದ ಬಂದ ಆದಾಯವನ್ನು ತೋರಿಸಬೇಕಾಗಿತ್ತು. ಆದರೆ ನಂತರ, ಸರ್ಕಾರಿ ನೌಕರರು ಬರವಣಿಗೆಯಲ್ಲಿ ತೊಡಗುವುದು, ಸಿನಿಮಾ, ನಾಟಕಗಳಲ್ಲಿ ಭಾಗವಹಿಸುವುದನ್ನು ನಿರ್ಬಂಧಕ್ಕೆ ಒಳಪಡಿಸಲಾಯಿತು.