ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಚಕರ ವಾಣಿ: ಸಮುದಾಯದ ಸಲೂನ್

Last Updated 13 ಸೆಪ್ಟೆಂಬರ್ 2020, 19:31 IST
ಅಕ್ಷರ ಗಾತ್ರ

ಮನುಷ್ಯ ತನ್ನ ಮನುಷ್ಯತ್ವವನ್ನು ಮರೆತು ತಾನೇ ಸೃಷ್ಟಿಸಿಕೊಂಡಿರುವ ಜಾತಿ-ಮತಗಳು ಅವನನ್ನೇ ಆಳುತ್ತಿರುವುದು ದುರದೃಷ್ಟಕರ ಸಂಗತಿ. ಇಂತಹ ಸಂದರ್ಭದಲ್ಲಿ, ಕೇರಳದ ಇಡುಕ್ಕಿ ಜೆಲ್ಲೆಯ ಗ್ರಾಮ ಪಂಚಾಯಿತಿಯೊಂದು ಸಮುದಾಯದ ಸಲೂನ್ ಸ್ಥಾಪನೆಗೆ ನಿರ್ಧರಿಸಿರುವುದು ಮಾನವೀಯತೆ ಕಡೆಗಿನ ದಿಟ್ಟ ಹೆಜ್ಜೆ.

ವಟ್ಟವಡ ಎಂಬ ಗ್ರಾಮದ ಕ್ಷೌರದಂಗಡಿಗಳಲ್ಲಿ ಪರಿಶಿಷ್ಟ ಜಾತಿಗೆ ಸೇರಿದವರಿಗೆ ಕ್ಷೌರ ಮಾಡಲು ನಿರಾಕರಿಸುತ್ತಿದ್ದುದರಿಂದ, ಎಲ್ಲ ಸಮುದಾಯದವರಿಗೂ ಅನ್ವಯಿಸುವ ಸಲೂನನ್ನು ನಿರ್ಮಿಸಲು ಖುದ್ದು ಪಂಚಾಯಿತಿಯೇ ಮುಂದಾಗಿರುವುದು (ಪ್ರ.ವಾ., ಸೆ. 11) ಮಾದರಿ ನಡೆ. ದಶಕಗಳಿಂದ ನಡೆಯುತ್ತಿದ್ದ ಜಾತಿ ತಾರತಮ್ಯ ನಿರ್ಮೂಲನೆಗೆ ಇದು ಸಹಕಾರಿ.

-ನಾಗೇಶ್ ಹರಳಯ್ಯ, ಕಲುಬುರ್ಗಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT