ಚಿಕ್ಕಬಳ್ಳಾಪುರ: ‘ಯುವ ಶಕ್ತಿ ದೇಶದ ಸಂಪತ್ತು. ಕಾಲೇಜು ವಿದ್ಯಾರ್ಥಿಗಳು ಇದನ್ನು ಅರಿತು ಕಡ್ಡಾಯವಾಗಿ ಮತ ದಾನದ ಪ್ರಕ್ರಿಯೆಯಲ್ಲಿ ಭಾಗವಹಿಸಿ ಸಂವಿಧಾನದ ಆಶಯ ಗಟ್ಟಿಗೊಳಿಸಬೇಕು’ ಎಂದು ಚಿಕ್ಕಬಳ್ಳಾಪುರ ಕ್ಷೇತ್ರದ ಚುನಾವ ಣಾಧಿಕಾರಿ ಶಿವಸ್ವಾಮಿ ತಿಳಿಸಿದರು.
ನಗರದ ಹೊರವಲಯದ ಎಸ್ಜೆಸಿಐಟಿ ಕಾಲೇಜಿನಲ್ಲಿ ಶನಿವಾರ ಆಯೋಜಿಸಿದ್ದ ಬಿಜಿಎಸ್ ನಿರ್ವಹಣಾ (ಬಿಜಿಎಸ್ಐಎಂಎಸ್)ವಿಭಾಗದಿಂದ ‘ಬಾನ್ವವೊಯೇಜ್’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಬಿಜಿಎಸ್ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಎನ್.ಶಿವರಾಮರೆಡ್ಡಿ, ನಗರಸಭೆ ಆಯುಕ್ತ ಉಮಾಕಾಂತ್, ಕಾಲೇಜಿನ ಪ್ರಾಂಶುಪಾಲ ಬಿ.ಆರ್.ವೆಂಕಟೇಶ್ಬಾಬು ಉಪಸ್ಥಿತರಿದ್ದರು.