ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೆಸಾರ್ಟ್‌ನಲ್ಲಿ ಹೊಯ್‌ಕೈ!

Last Updated 21 ಜನವರಿ 2019, 20:00 IST
ಅಕ್ಷರ ಗಾತ್ರ

ವಿಧಾನಸಭೆ ಈ ನಾಡಿನ ಪರಮೋಚ್ಚ ವೇದಿಕೆ. ಅಲ್ಲಿ ನಮ್ಮ ಶಾಸಕರ ಒಂದೊಂದು ಮಾತಿನಲ್ಲೂ ಲಕ್ಷಾಂತರ ಪ್ರಜೆಗಳ ಧ್ವನಿ ಇದೆ. ಪ್ರಜೆಗಳಿಗೆ, ನಾಡಿಗೆ ಮಾದರಿಯಾಗಿ ಇರಬೇಕಾದುದು ಜನಪ್ರತಿನಿಧಿಗಳ ನೈತಿಕ ಕರ್ತವ್ಯ ಕೂಡ. ಹೀಗಿರುವಾಗ, ಒಂದಿಬ್ಬರು ಶಾಸಕರು ರೆಸಾರ್ಟ್‌ನಲ್ಲಿ ಹೊಡೆದಾಡಿಕೊಂಡಿದ್ದಾರೆ ಎನ್ನಲಾದ ವಿಷಯ ನಾಗರಿಕ ಸಮಾಜ ತಲೆತಗ್ಗಿಸುವಂತೆ ಮಾಡಿದೆ. ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಟ್ಟಿರುವವರಿಗೆ ನೋವನ್ನು ಉಂಟುಮಾಡಿದೆ.

ಇವರು ಗುದ್ದಾಡಿದ್ದು ನಾಡಿನ ಅಭಿವೃದ್ಧಿಯ ವಿಷಯಕ್ಕಾಗಿದ್ದರೆ ಅರಗಿಸಿಕೊಳ್ಳಬಹುದಿತ್ತು. ಆದರೆ, ಅವರ ಈ ವರ್ತನೆಯ ಹಿಂದೆ ರಾಜಕೀಯ ಸ್ವಾರ್ಥ ಅಡಗಿದೆ. ದೇಶದ ರಾಜಕೀಯ ವಿದ್ಯಮಾನವನ್ನು ಗಮನಿಸಿದರೆ, ಎಲ್ಲ ರಾಜಕೀಯ ಪಕ್ಷಗಳೂ ಆಗಾಗ್ಗೆ ಇಂತಹ ಘಟನೆಗಳಿಗೆ ಸಾಕ್ಷಿಯಾಗುತ್ತಿರುವುದು ದುರದೃಷ್ಟಕರ.

ಬೀರಣ್ಣ ನಾಯಕ ಮೊಗಟಾ,ಯಲ್ಲಾಪುರ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT