ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಹನ ಡಿಕ್ಕಿ: ಚಿರತೆ ಸಾವು

Last Updated 28 ಮಾರ್ಚ್ 2018, 19:30 IST
ಅಕ್ಷರ ಗಾತ್ರ

ಎಚ್.ಡಿ.ಕೋಟೆ(ಮೈಸೂರು ಜಿಲ್ಲೆ): ತಾಲ್ಲೂಕಿನ ನಾಗರಹೊಳೆ ರಾಷ್ಟ್ರೀಯ ಉದ್ಯಾನ ವ್ಯಾಪ್ತಿಯ ಡಿ.ಬಿ.ಕುಪ್ಪೆ ವನ್ಯಜೀವಿ ವಲಯದ ಬಳ್ಳೆ ರಸ್ತೆಯಲ್ಲಿ ಬುಧವಾರ ವಾಹನ ಡಿಕ್ಕಿ ಹೊಡೆದು ಹೆಣ್ಣು ಚಿರತೆ ಮೃತಪಟ್ಟಿದೆ.

ಮಾನಂದವಾಡಿ ಮುಖ್ಯರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಸ್ಥಳದಲ್ಲೇ ಚಿರತೆ ಮೃತಪಟ್ಟಿದೆ. ವಿಷಯವನ್ನು ತಿಳಿದ ಪ್ರಯಾಣಿಕರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಬಳಿಕ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಬಂದು ಅಂತರಸಂತೆ ಚೆಕ್‌ಪೋಸ್ಟ್‌ಗೆ ಮಾಹಿತಿ ನೀಡಿದರು. ಅನುಮಾನಾಸ್ಪದ ಕಾರೋಂದನ್ನು ವಶಪಡಿಸಿಕೊಂಡಿರುವ ಅಂತರಸಂತೆ ಚೆಕ್ ಪೋಸ್ಟ್‌ ಸಿಬ್ಬಂದಿ ವಿಚಾರಣೆ ನಡೆಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT