ಮಾನಂದವಾಡಿ ಮುಖ್ಯರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಸ್ಥಳದಲ್ಲೇ ಚಿರತೆ ಮೃತಪಟ್ಟಿದೆ. ವಿಷಯವನ್ನು ತಿಳಿದ ಪ್ರಯಾಣಿಕರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಬಳಿಕ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಬಂದು ಅಂತರಸಂತೆ ಚೆಕ್ಪೋಸ್ಟ್ಗೆ ಮಾಹಿತಿ ನೀಡಿದರು. ಅನುಮಾನಾಸ್ಪದ ಕಾರೋಂದನ್ನು ವಶಪಡಿಸಿಕೊಂಡಿರುವ ಅಂತರಸಂತೆ ಚೆಕ್ ಪೋಸ್ಟ್ ಸಿಬ್ಬಂದಿ ವಿಚಾರಣೆ ನಡೆಸುತ್ತಿದ್ದಾರೆ.