ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾಧ್ಯಮಗಳೇ ಎಡವಿದರೆ?

Last Updated 17 ಆಗಸ್ಟ್ 2018, 19:30 IST
ಅಕ್ಷರ ಗಾತ್ರ

ಸಾಮಾಜಿಕ ಜಾಲತಾಣಗಳು ಮಾಹಿತಿ ಕೊಡುವುದಕ್ಕಿಂತ ಹೆಚ್ಚಾಗಿ ಸುಳ್ಳು ಸುದ್ದಿಗಳ ಭಂಡಾರಗಳಂತಾಗಿವೆ. ಇಲ್ಲಿ ಬರುವ ಮಾಹಿತಿಯನ್ನು ನಿಜವೆಂದು ನಂಬಿ ಮತ್ತಷ್ಟು ಪ್ರಚಾರ ಮಾಡುವವರ ಸಂಖ್ಯೆ ಕಡಿಮೆಯೇನಿಲ್ಲ. ನಿಖರ ಸುದ್ದಿಗಳನ್ನೇ ಕೊಡಬೇಕಾದ ಜವಾಬ್ದಾರಿ ಇರುವ ಮಾಧ್ಯಮಗಳೇ ಎಡವಿದರೆ?

ಅಟಲ್‌ ಬಿಹಾರಿ ವಾಜಪೇಯಿ ಅವರು ಸಂಜೆ 5.05ಕ್ಕೆ ನಿಧನ ಹೊಂದಿದ್ದಾಗಿ ಅವರಿಗೆ ಚಿಕಿತ್ಸೆ ಕೊಡುತ್ತಿದ್ದ ವೈದ್ಯರು ಗುರುವಾರ ಸಂಜೆ ಘೋಷಿಸಿದ್ದರು. ಆದರೆ ಕೆಲವು ಸುದ್ದಿ ವಾಹಿನಿಗಳು ಮಧ್ಯಾಹ್ನ 2.30ಕ್ಕೇ ವಾಜಪೇಯಿ ಅವರ ನಿಧನದ ಸುದ್ದಿಯನ್ನು ಬಿತ್ತರಿಸಿದ್ದವು.

ಅತ್ಯಂತ ಎಚ್ಚರದಿಂದ ಕಾರ್ಯನಿರ್ವಹಿಸಬೇಕಾದ ಮಾಧ್ಯಮಗಳೇ ಸುಳ್ಳುಸುದ್ದಿಯನ್ನು ಪ್ರಸಾರ ಮಾಡಿದರೆ ಜನರು ಯಾರನ್ನು ನಂಬಬೇಕು? ಮಾಧ್ಯಮಗಳು ಇನ್ನಷ್ಟು ಜವಾಬ್ದಾರಿಯುತವಾಗಿ ವರ್ತಿಸುವುದು ಅಗತ್ಯ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT