ರಾಜ್ಯ ಹಿಂದುಳಿದ ವರ್ಗಗಳ ಆಯೋಗ ನಡೆಸಿರುವ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯು (ಜಾತಿಗಣತಿ) ಇನ್ನೂ ಸರ್ಕಾರದ ಕೈ ಸೇರಿಲ್ಲ ಎಂದು ಸಚಿವ ಬಿ. ಶ್ರೀರಾಮುಲು ವಿಧಾನಪರಿಷತ್ತಿನಲ್ಲಿ ಹೇಳಿದ್ದಾರೆ. ಕೋಟ್ಯಂತರ ರೂಪಾಯಿ ಖರ್ಚು ಮಾಡಿ ನಡೆಸಿದಂತಹ ಸಮೀಕ್ಷೆಯು ಹಲವಾರು ವರ್ಷಗಳಾದರೂ ಇನ್ನೂ ಸರ್ಕಾರಕ್ಕೆ ತಲುಪಿಲ್ಲ ಎಂದರೆ ಏನರ್ಥ? ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಈ ಸಮೀಕ್ಷೆ ನಡೆಸಲಾಗಿತ್ತು. ನಂತರ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದರು. ಈಗ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾರೆ. ಇಂತಹ ಕಾಟಾಚಾರಕ್ಕೆ ಯಾಕೆ ಸಾರ್ವಜನಿಕರ ಹಣವನ್ನು ಪೋಲು ಮಾಡಿ ಸಮೀಕ್ಷೆ ನಡೆಸಬೇಕಾಗಿತ್ತು?