ಪಠ್ಯಪುಸ್ತಕಗಳನ್ನು ರಾಜ್ಯದ ಎಲ್ಲ ಶಾಲೆಗಳಿಗೂ ತಲುಪಿಸಲು ತಡವಾಗುತ್ತದೆ ಎನ್ನುವುದಾದರೆ, ಪಾಠ ಬೋಧನೆಗೆ ಅನುಕೂಲವಾಗುವಂತೆ ಪರಿಷ್ಕೃತ ಪಠ್ಯದ ನಕಲು ಪ್ರತಿಯಾದರೂ ತಲುಪುವಂತೆ ಮಾಡಬೇಕಿತ್ತು. ಹಾಗೆ ಮಾಡದಿರುವುದು ಶಿಕ್ಷಕರು ಹಾಗೂ ಮಕ್ಕಳಲ್ಲಿ ಗೊಂದಲವನ್ನು ಉಂಟುಮಾಡಿದೆ. ಈ ದಿಸೆಯಲ್ಲಿ ಸರ್ಕಾರ ಕೂಡಲೇ ಸ್ಪಂದಿಸಬೇಕು. ಮಕ್ಕಳ ಕೈಗೆ ಪುಸ್ತಕ ಸಿಗುವಂತೆ ಮಾಡಬೇಕು.